Webdunia - Bharat's app for daily news and videos

Install App

ಅತ್ಯಾಚಾರ-ಕೊಲೆ ಆರೋಪಿಗಳನ್ನು ಪೊಲೀಸ್ ಠಾಣೆಯಿಂದ ಹೊರಗೆಳೆದು ಮರಣದಂಡನೆ ನೀಡಿದ ಜನರ ಗುಂಪು

ಅತಿಥಾ
ಮಂಗಳವಾರ, 20 ಫೆಬ್ರವರಿ 2018 (17:24 IST)
ಅತ್ಯಾಚಾರ ಹಾಗು ಕೊಲೆ ಪ್ರಕರಣದಲ್ಲಿ ಪೊಲೀಸರ ಅತಿಥಿಗಳಾಗಿದ್ದ ಇಬ್ಬರನ್ನು ಠಾಣೆಯಿಂದ ಹೊರಗೆಳೆದ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿ ಕೊಂದ ಘಟನೆ ಸೋಮವಾರದಂದು ಅರುಣಾಚಲ ಪ್ರದೇಶದ ಲೋಹಿತ್‌ ಜಿಲ್ಲೆಯಲ್ಲಿ ನಡೆದಿದೆ.
ಅಸ್ಸಾಂನ ಟೀ ತೋಟದಲ್ಲಿ ಕಾರ್ಮಿಕರಾಗಿರುವ 30 ವರ್ಷದ ಸಂಜಯ್ ಸೊಬೊರ್‌ ಮತ್ತು 25 ವರ್ಷದ ಜಗದೀಶ್ ಲೋಹರ್ ಎಂಬುವವರನ್ನು ಜನರ ಗುಂಪು ಪೊಲೀಸ್ ಠಾಣೆಯಿಂದ ಮಾರುಕಟ್ಟೆ ಪ್ರದೇಶಕ್ಕೆ ಏಳೆದು ಪೊಲೀಸರ ಎದುರೇ ತಳಿಸಿ ಕೊಂದಿದ್ದಾರೆ. ನಂತರ ಅವರ ದೇಹಗಳನ್ನು ಮಾರುಕಟ್ಟೆ ಪ್ರದೇಶದಲ್ಲಿ ಎಸೆಯಲಾಗಿದೆ. ಆರೋಪಿಗಳಿಗೆ ಬೆಂಕಿ ಹಚ್ಚಲು ಮುಂದಾದ ಜನರ ಗುಂಪನ್ನು ಭದ್ರತಾ ಸಿಬ್ಬಂದಿಯವರು ತಡೆದರು.
 
ಫೆಬ್ರವರಿ 12 ರಂದು, ವಾಕ್ರೊ ಪೊಲೀಸ್ ಠಾಣೆಯ ಅಡಿಯಲ್ಲಿ ಐದುವರೆ ವರ್ಷದ ಹುಡುಗಿ ಹಳ್ಳಿಯಿಂದ ಕಾಣೆಯಾಗಿದ್ದಳು. ನಂತರ, ಮಗುವಿನ ಸಂಬಂಧಿಗಳು ರುಂಡರಹಿತ ಮತ್ತು ಅಂಗಹೀನಗೊಂಡ ದೇಹವನ್ನು ನಾಮ್ಗೊ ಗ್ರಾಮದ ಕಾಡಿನಲ್ಲಿರುವ ಕೊಳವೊಂದರ ಬಳಿ ಪತ್ತೆ ಮಾಡಲಾಯಿತು.
 
ನಂತರ, ಅತ್ಯಾಚಾರ ಮತ್ತು ಬಾಲಕಿಯ ಕೊಲೆಯ ಅನುಮಾನದ ಮೇಲೆ ಸೊಬೊರ್‌ ಮತ್ತು ಲೋಹರ್ ಎಂಬುವವರನನ್ನು ಬಂಧಿಸಲಾಯಿತು. ಇಬ್ಬರು ಅಪರಾಧವನ್ನು ಒಪ್ಪಿಕೊಂಡಿದ್ದರು. ಮತ್ತು ಇಬ್ಬರನ್ನು ಕೋರ್ಟ್‌ಗೆ ಹಾಜರು ಮಾಡಲಾಗಿತ್ತು.
 
ಪ್ರಕರಣದಲ್ಲಿ ಕೆಲ ಅನಾಮಧೇಯ ವ್ಯಕ್ತಿಗಳ ಮೇಲೆ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಇದೇ ಸಂಬಂಧ ಮೂರು ಪೇದೆಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
 
2015 ರಲ್ಲಿ ಇಂಥದ್ದೇ ಪ್ರಕರಣದಲ್ಲಿ ನಾಗಾಲ್ಯಾಂಡ್‌ನ ದಿಮಾಪುರ ಕೇಂದ್ರ ಕಾರಾಗೃಹದಲ್ಲಿದ್ದ ಅತ್ಯಾಚಾರ ಆರೋಪಿಯನ್ನು ಜನರ ಗುಂಪೊಂದು ಹೊರಗೆಳೆದು ಕೊಲೆ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments