ಪತ್ನಿಯ ಹತ್ಯೆಗಾಗಿ ಸಂಚು ರೂಪಿಸಿದ ಪತಿ: ಆದರೆ ದೈವ ದೊಡ್ಡದು

Webdunia
ಗುರುವಾರ, 14 ಡಿಸೆಂಬರ್ 2023 (12:37 IST)
ಆಘಾತಕಾರಿ ಘಟನೆಯೊಂದರಲ್ಲಿ, ಪತ್ನಿಯ ಹತ್ಯೆಗೆ ಸುಪಾರಿ ನೀಡಿದ್ದ ವ್ಯಕ್ತಿಯೇ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. 
 
ವರದಿಗಳ ಪ್ರಕಾರ, ಯಾಸಿರ್ ಎಂಬಾತ ತನ್ನ ಪತ್ನಿ ಮೆಹ್ಸರ್ ಜಹಾನ್ ಹತ್ಯೆಗೈದು ವಿಮೆ ಹಣ ಲಪಟಾಯಿಸುವ ಉದ್ದೇಶದಿಂದ ರೌಡಿಗಳಿಗೆ ಸುಪಾರಿ ನೀಡಿದ್ದಾನೆ ಎನ್ನಲಾಗಿದೆ. 
 
ಯಾಸಿರ್ ಮೊಬೈಲ್ ಕರೆಗಳನ್ನು ಆಧರಿಸಿ ಪೊಲೀಸರು ಇಬ್ಬರು ಶಾರ್ಪ್ ಶೂಟರ್‌ಗಳಾದ ಅಯೋಧ್ಯಾ ಪ್ರಸಾದ್ ಮತ್ತು ಸಾದಿಕ್ ಅಲಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಪತ್ನಿಯ ಹತ್ಯೆಗೈಯುವ ಯಾಸಿರ್ ಸಂಚು ಬಹಿರಂಗಗೊಂಡಿದೆ.  
 
ಯಾಸಿರ್ ತನ್ನ ಪತ್ನಿಯ ಹತ್ಯೆಗಾಗಿ ಸಂಚು ರೂಪಿಸಿದ್ದು ಮುಂಗಡವಾಗಿ 4 ಸಾವಿರ ರೂಪಾಯಿಗಳನ್ನು ನೀಡಿದ್ದಾನೆ ವಿಮೆ ಹಣ ಬಂದ ನಂತರ ಬಾಕಿ 40 ಸಾವಿರ ರೂಪಾಯಿಗಳನ್ನು ನೀಡುವುದಾಗಿ ಒಪ್ಪಿಕೊಂಡಿದ್ದ ಎಂದು ಬಂಧಿತ ಆರೋಪಿಗಳು ವಿಚಾರಣೆ ವೇಳೆಯಲ್ಲಿ ಬಾಯಿಬಿಟ್ಟಿದ್ದಾರೆ. 
 
ಡಿಸೆಂಬರ್ 10 ರಂದು ತನ್ನ ಪ್ಲ್ಯಾನ್ ಪ್ರಕಾರ ಯಾಸಿರ್ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ, ಸುಪಾರಿ ಪಡೆದ ಹಂತಕರು ಅವರ ಮೇಲೆ ದಾಳಿ ಮಾಡಿದ್ದಾರೆ. ಪತ್ನಿಯ ಮೈಮೇಲಿದ್ದ ಆಭರಣಗಳನ್ನು ದೋಚಿ ಗುಂಡಿನ ದಾಳಿ ನಡೆಸಿದ್ದಾರೆ. ಆದರೆ, ಅಕಸ್ಮಿಕವಾಗಿ ಗುಂಡು ಯಾಸಿರ್‌ಗೆ ತಗುಲಿದೆ. ಮೆಹರ್ ತಪ್ಪಿಸಿಕೊಂಡಿದ್ದಾಳೆ. ಆಕೆಯ ಮೇಲೆ ಗುಂಡಿನ ದಾಳಿ ನಡೆಸಲು ಪ್ರಯತ್ನಿಸಿದರಾದರೂ ವಿಫಲವಾಗಿದ್ದಾರೆ. ಗುಂಡಿನ ಶಬ್ದ ಕೇಳಿ ಗ್ರಾಮಸ್ಥರು ಬರುತ್ತಿರುವುದು ಕಂಡ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
 
ಏತನ್ಮಧ್ಯೆ, ಪೊಲೀಸರು ಆರೋಪಿ ಯಾಸಿರ್ ವಿರುದ್ಧ ಪತ್ನಿಯ ಹತ್ಯೆ ಸಂಚಿನ ಆರೋಪದ ಮೇಲೆ ಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಸುಪಾರಿ ಪಡೆದ ಇಬ್ಬರು ಆರೋಪಿಗಳನ್ನೂ ವಶಕ್ಕೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments