Webdunia - Bharat's app for daily news and videos

Install App

ರಾಷ್ಟ್ರ ಒಡೆಯಲು ಬಯಸುತ್ತಿದ್ದವರಿಗೆ ಮಹಾರಾಷ್ಟ್ರದ ಜನರಿಂದ ತಕ್ಕ ಪಾಠ: ಕಂಗನಾ ಲೇವಡಿ

Sampriya
ಸೋಮವಾರ, 25 ನವೆಂಬರ್ 2024 (15:03 IST)
Photo Courtesy X
ಮುಂಬೈ:ಮಹಾರಾಷ್ಟ್ರ ವಿಧಾನಸಭೆ ಫಲಿತಾಂಶದ ಬಳಿಕ ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್‌ ಪ್ರತಿಕ್ರಿಯಸಿದ್ದು, ದೇಶ ಒಡೆಯುವ ಮಾತನಾಡುತ್ತಿದ್ದವರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಗೆಲುವಿನ ಕುರಿತು ಮಾತನಾಡಿರುವ ಅವರು, ಮಹಾರಾಷ್ಟ್ರದ ಜನರು ಅಭಿವೃದ್ಧಿ ಮತ್ತು ಸ್ಥಿರ ಸರ್ಕಾರಕ್ಕೆ ಮತ ನೀಡಿದ್ದಾರೆ. ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಬಿಜೆಪಿ ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಹೇಳಿದರು.

ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಗೆಲುವಿಗೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಂಗನಾ ಅಭಿನಂದನೆ ತಿಳಿಸಿದರು.

ಚುನಾವಣಾ ಪ್ರಚಾರದ ವೇಳೆ ಪ್ರತಿಯೊಂದು ಮಗುವು ಮೋದಿ–ಮೋದಿ ಎಂದು ಜಪಿಸುವುದನ್ನು ನಾನು ನೋಡಿದ್ದೆ. ಪ್ರಪಂಚದಲ್ಲಿ ಪ್ರಧಾನಿ ಮೋದಿ ಅವರು ಅತ್ಯುನ್ನತ ನಾಯಕರಾಗಿದ್ದಾರೆ. ಬಿಜೆಪಿ ಒಂದು ಬ್ರಾಂಡ್‌ ಆಗಿದೆ. ಇಂದು, ದೇಶದ ಜನರು ಆ ಬ್ರಾಂಡ್‌ನಲ್ಲಿ ನಂಬಿಕೆ ಹೊಂದಿದ್ದಾರೆ’ ಎಂದು ಕಂಗನಾ ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ  ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ 235 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮಹಾವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟವು 49 ಕ್ಷೇತ್ರ ಹಾಗೂ ಪಕ್ಷೇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments