Webdunia - Bharat's app for daily news and videos

Install App

ಸೀಬೆ ಹಣ್ಣು ಕಿತ್ತಿದ್ದಕ್ಕೆ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ !

Webdunia
ಭಾನುವಾರ, 6 ನವೆಂಬರ್ 2022 (11:33 IST)
ಲಕ್ನೋ : ತೋಟದಿಂದ ಸೀಬೆ ಹಣ್ಣನ್ನು ಕಿತ್ತಿದ್ದಕ್ಕೆ ದಲಿತ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವ ವ್ಯಕ್ತಿ ಓಂ ಪ್ರಕಾಶ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಸಹೋದರ ಸತ್ಯ ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದಾರೆ.

ನನ್ನ ಸಹೋದರ ಹಸಿವನ್ನು ತಣಿಸಿಕೊಳ್ಳಲು ಹೊರಗಡೆ ಹೋಗಿದ್ದ. ಆತ ಇತರರ ತೋಟದಿಂದ ಒಂದು ಸೀಬೆ ಹಣ್ಣನ್ನು ಕಿತ್ತು ತಿಂದಿದ್ದಕ್ಕೆ ಹೊಡೆದು ಸಾಯಿಸಿದ್ದಾರೆ. ಈ ವಿಚಾರವನ್ನು ಒಬ್ಬ ಹುಡುಗ ಬಂದು ಹೇಳಿದಾಗಲೇ ನಮಗೆ ವಿಷಯ ತಿಳಿಯಿತು ಎಂದಿದ್ದಾರೆ.

ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಓಂ ಪ್ರಕಾಶ್ನನ್ನು ಮೊದಲಿಗೆ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments