Webdunia - Bharat's app for daily news and videos

Install App

ವರದಕ್ಷಿಣೆ ಕೇಳಿದ ವರನಿಗೆ ಮದುವೆ ಮನೆಯಲ್ಲೇ ಧರ್ಮದೇಟು!

Webdunia
ಭಾನುವಾರ, 19 ಡಿಸೆಂಬರ್ 2021 (12:35 IST)
ಲಕ್ನೋ : ಉತ್ತರಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಾಹಿಬಾಬಾದ್ ಪ್ರದೇಶದಲ್ಲಿ ವರನೊಬ್ಬ ಮದುವೆ ಸಮಯದಲ್ಲಿ ಹೆಚ್ಚು ಹಣ ಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದಾನೆ.

ಈ ಪರಿಣಾಮ ಅಲ್ಲಿದ್ದ ಜನರು ಆತನನ್ನು ಥಳಿಸಿದ್ದು, ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಬಿಡಲಾಗಿದೆ. ಸಾಹಿಬಾಬಾದ್ನ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ರಾತ್ರಿ ಆರತಕ್ಷತೆ ಸಮಾರಂಭ ನಡೆಯುತ್ತಿದ್ದು, ಈ ವೇಳೆ ವರನ ಕಡೆಯವರು 10 ಲಕ್ಷ ರೂ. ವರದಕ್ಷಿಣೆ ಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದಾರೆ.

ಇದರಿಂದ ರೊಚ್ಚಿಗೆದ್ದ ವಧುವಿನ ಕಡೆಯವರು ವರನ ಜೊತೆ ಕೆಟ್ಟದಾಗಿ ಮಾತನಾಡು ಪ್ರಾರಂಭಿಸಿದ್ದಾರೆ. ನಂತರ ವರನನ್ನು ಮಂಟಪದಿಂದ ಎಳೆದೊಯ್ದು ಥಳಿಸಲು ಪ್ರಾರಂಭಿಸಿದ್ದಾರೆ.

ಈ ವೇಳೆ ಆತನ ಸಂಬಂಧಿ ವಧುವಿನ ಕಡೆಯವರನ್ನು ತಡೆದಿದ್ದಾರೆ. ಗಲಾಟೆ ನಡೆಯುತ್ತಿರಬೇಕಾದರೆ ಸಂಭಾಗಣದಲ್ಲಿದ್ದ ಜನರು ಈ ಘಟನೆಯನ್ನು ಫೋನ್ ನಲ್ಲಿ ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಅದು ಅಲ್ಲದೇ ವರನ ವಿರುದ್ಧ ದೂರು ಸಹ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments