Select Your Language

Notifications

webdunia
webdunia
webdunia
webdunia

ಈರುಳ್ಳಿ ಖರೀದಿಸಲು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಈರುಳ್ಳಿ ಖರೀದಿಸಲು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಹೈದರಾಬಾದ್ , ಮಂಗಳವಾರ, 10 ಡಿಸೆಂಬರ್ 2019 (06:47 IST)
ಹೈದರಾಬಾದ್ : ಈರುಳ್ಳಿ ಖರೀದಿಸಲು ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಗುಡಿವಾಡದ ಮಾರುಕಟ್ಟೆಯಲ್ಲಿ  ನಡೆದಿದೆ.



ಸಂಬಯ್ಯ(55)ಮೃತಪಟ್ಟ ವ್ಯಕ್ತಿ. ರಾಜ್ಯ ಸರ್ಕಾರ ರೈತರ ಮಾರುಕಟ್ಟೆಯಲ್ಲಿ ಸಬ್ಸಿಡಿ ದರದಲ್ಲಿ ಪ್ರತಿ ಕೆ.ಜಿ.ಗೆ 25ರೂ.ನಂತೆ ಈರುಳ್ಳಿ ಮಾರಾಟ ಮಾಡುತ್ತಿದೆ. ಈ ವೇಳೆ ಈರುಳ್ಳಿ ಖರೀದಿಸಲು ಬಂದಿದ್ದ ಸಂಬಯ್ಯ ಸರತಿ ಸಾಲಿನಲ್ಲಿ ನಿಂತಿದ್ದಾರೆ.

 

ಆ ವೇಳೆ ಅವರು ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯದಲ್ಲಿಯೇ ಅವರು ಸಾವನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಸಾವನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
 


Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ದಿನೇಶ್ ಗುಂಡೂರಾವ್ ಔಟ್ - ಕಾಂಗ್ರೆಸ್ ಗೆ ಶಾಕ್