Select Your Language

Notifications

webdunia
webdunia
webdunia
webdunia

ಶಾಲೆಯೊಂದರಲ್ಲಿ ಕಾವಲುಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆ..!

hanging himself
ಹರ್ಯಾಣ , ಭಾನುವಾರ, 3 ಸೆಪ್ಟಂಬರ್ 2023 (16:00 IST)
ಹರ್ಯಾಣ ಜಿಂದ್ನ ಕರ್ಸಿಂಧು ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 57 ವರ್ಷದ ಕಾವಲುಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಉಚ್ಚನ ಬ್ಲಾಕ್ನ ಮಂಡಿ ಕಲನ್ ಗ್ರಾಮದ ರಿಷಿಪಾಲ್ ಕರಸಿಂಧು ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಸ್ವೀಪರ್ ಕಮ್ ವಾಚ್ಮನ್ ಆಗಿ ಕೆಲಸ ಮಾಡುತ್ತಿದ್ದರು.ನಿನ್ನೆ ಶಾಲೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಿಷಿಪಾಲ್ ಶವದ ಬಳಿ ಸಿಕ್ಕಿರುವ ಸೂಸೈಡ್ ನೋಟ್ ಹಾಗೂ ಅವರ ಪುತ್ರನ ದೂರಿನ ಆಧಾರದ ಮೇಲೆ ಪ್ರಾಂಶುಪಾಲರು ಸೇರಿದಂತೆ ಮೂವರು ಶಿಕ್ಷಕರ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಉಚ್ಚನ ಠಾಣೆ ಪ್ರಭಾರಿ ರವೀಂದ್ರ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೆ.11ರಂದು ಬೆಂಗಳೂರು ಬಂದ್‌ ಖಾಸಗಿ ಬಸ್‌, ಆಟೋ, ಟ್ಯಾಕ್ಸಿಗಳ ಸೇವೆ ಸ್ಥಗಿತ