Webdunia - Bharat's app for daily news and videos

Install App

ಪತ್ನಿಗೆ ಇಷ್ಟವಿಲ್ಲವೆಂದು 7 ವರ್ಷದ ಮಗನನ್ನೇ ಕತ್ತು ಹಿಸುಕಿ ಕೊಂದ ಪಾಪಿ!

Webdunia
ಬುಧವಾರ, 17 ಮೇ 2023 (12:50 IST)
ಭೋಪಾಲ್ : ವ್ಯಕ್ತಿಯೊಬ್ಬ ತನ್ನ 7 ವರ್ಷದ ಮಗನನ್ನೇ ಕತ್ತು ಹಿಸುಕಿ ಕೊಲೆಗೈದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.
 
ಪ್ರತೀಕ್ ಕೊಲೆಯಾದ ದುರ್ದೈವಿಯಾಗಿದ್ದು, ಈತ 3ನೇ ಕ್ಲಾಸಿನಲ್ಲಿ ಓದುತ್ತಿದ್ದ. ಪ್ರತೀಕ್ ಪ್ರತಿನಿತ್ಯ ತನ್ನ ಅಜ್ಜಿ ಜೊತೆನೇ ಮಲಗುತ್ತಿದ್ದ. ಆದರೆ ಭಾನುವಾರ ಆರೋಪಿ ತಂದೆ ಶಶಿಪಾಲ್, ಕೂಲರ್ ಹಾಕಿದ್ದೀನಿ. ಇವತ್ತು ತನ್ನ ಜೊತೆ ಮಲಗುವಂತೆ ಒತ್ತಾಯಿಸಿದ್ದ. ಕೂಲರ್ ಇದೆ ಅಂದತಕ್ಷಣ ಬಾಲಕ, ಅಜ್ಜಿ ಜೊತೆ ತಾನು ಇಂದು ತಂದೆ ಜೊತೆ ಮಲಗುವುದಾಗಿ ಹೇಳಿದ್ದಾನೆ. ಅಂತೆಯೇ ಪ್ರತೀಕ್ ತಂದೆ ಜೊತೆ ಕೋಣೆಯಲ್ಲಿ ಮಲಗಿದ್ದನು.

ಇತ್ತ ಮಗ ನಿದ್ದೆಗೆ ಜಾರುತ್ತಿದ್ದಂತೆಯೇ ಶಶಿಪಾಲ್ ಟಿವಿ ವಾಲ್ಯೂಮ್ ಜಾಸ್ತಿ ಮಾಡಿದ್ದಾನೆ. ನಂತರ ಮಗನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅಲ್ಲದೆ ಇದೇ ವೇಳೆ ಪತ್ನಿಗೆ ವೀಡಿಯೋ ಕಾಲ್ ಮಾಡಲು ಪ್ರಯತ್ನಿಸಿದ್ದಾನೆ. ಆದರೆ ಆಕೆ ಆ ಸಮಯದಲ್ಲಿ ಕಾಲ್ ಪಿಕ್ ಮಾಡಿರಲಿಲ್ಲ. ಮಗನನ್ನು ಕತ್ತು ಹಿಸುಕಿ ಕೊಲೆ ಮಾಡಿದ ದೃಶ್ಯವನ್ನು ಕೂಡ ಸೆರೆಹಿಡಿದು ಮೂರನೇ ಪತ್ನಿ ಪಾಯಲ್ ಗೆ ವಾಟ್ಸಪ್ ಮೂಲಕ ಕಳುಹಿಸಿದ್ದಾನೆ. ಆದರೆ ಅವಳು ಅದಾಗಲೇ ಈತನ ನಂಬರ್ ಬ್ಲಾಕ್ ಮಾಡಿದ್ದರಿಂದ ವೀಡಿಯೋ ನೋಡಿರಲಿಲ್ಲ. ನಂತರ ಈತ ಅಲ್ಲಿಂದ ಪರಾರಿಯಾಗಿದ್ದಾನೆ.

ಘಟನೆಯ ಬಳಿಕ ನನ್ನ ಮೂರನೇ ಪತ್ನಿ ಪಾಯಲ್ಗೆ ಮಗನನ್ನು ಕೊಲೆಗೈದಿರುವುದಾಗಿ ವೀಡಿಯೋ ಹಾಗೂ ಮೆಸೇಜ್ ಕಳುಹಿಸಿದ್ದೇನೆ. ಇನ್ನು ಮುಂದೆ ನಿನಗೆ ನನ್ನ ಮಗನಿಂದ ತೊಂದರೆಯಾಗಲ್ಲ ಎಂದು ಹೇಳಿದ್ದೇನೆ. ಆದರೆ ಬ್ಲಾಕ್ ಮಾಡಿದ್ದರಿಂದ ಆಕೆಗೆ ವೀಡಿಯೋ ಹಾಗೂ ಮೆಸೇಜ್ ರೀಚ್ ಆಗಿರಲಿಲ್ಲ ಎಂದು ಶಶಿಪಾಲ್ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments