Webdunia - Bharat's app for daily news and videos

Install App

ಶ್ರೀಲಂಕಾ, ಪಾಕಿಸ್ತಾನ ರೀತಿಯ ಪರಿಸ್ಥಿತಿ ಕರ್ನಾಟಕಕ್ಕೆ ಬರಬಾರದು : ಪ್ರತಾಪ್ ಸಿಂಹ

Webdunia
ಗುರುವಾರ, 8 ಜೂನ್ 2023 (10:46 IST)
ನವದೆಹಲಿ : ಕಾಂಗ್ರೆಸ್ ಗ್ಯಾರಂಟಿಯಿಂದ ಶ್ರೀಲಂಕಾ , ಪಾಕಿಸ್ತಾನ ರೀತಿಯ ಪರಿಸ್ಥಿತಿ ಕರ್ನಾಟಕಕ್ಕೆ ಬರಬಾರದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಚಾರದಲ್ಲಿ ಡಿ.ಕೆ ಶಿವಕುಮಾರ್ ಉಚಿತ, ಖಚಿತ, ನಿಶ್ಚಿತ ಅಂತ ಹೇಳಿದ್ರು. ಸಿದ್ದರಾಮಯ್ಯ ಅವರು ಎಲ್ಲರಿಗೂ ಉಚಿತ ಅಂದ್ರು. ರಾಜಸ್ಥಾನ, ಪಂಜಾಬ್ ಎಲ್ಲಾ ಕಡೆ ಭರವಸೆ ಕೊಟ್ಟು ಟೋಪಿ ಹಾಕಿದ್ರು. ಅದಕ್ಕೆ ನಾವು ಈ ಭರವಸೆಗಳನ್ನು ಜನರು ನಂಬಲ್ಲ ಅಂತಾ ನಿರ್ಲಕ್ಷ್ಯ ಮಾಡಿದ್ವಿ. ಆದರೆ ಜನರು ಅದನ್ನು ನಂಬಿಕೊಂಡು ಮತ ಹಾಕಿದ್ದಾರೆ ಎಂದು ಹೇಳಿದರು.

ಈಗ ಕಂಡಿಷನ್ ಗಳನ್ನು ಹಾಕುವ ಕೆಲಸ ನಡೆಯುತ್ತಿದೆ. ಈ ಕಂಡಿಷನ್ ನಿಂದ ಬಹುತೇಕ ಬೆಂಗಳೂರು ಜನರಿಗೆ ಗೃಹ ಜ್ಯೋತಿ ಲಾಭ ಸಿಗುವುದಿಲ್ಲ. ಗೃಹ ಲಕ್ಷ್ಮಿ ವಿಚಾರದಲ್ಲೂ ತೆರಿಗೆದಾರರಿಗೆ ಯೋಜನೆ ಇಲ್ಲ ಎಂದಿದ್ದಾರೆ. ಯುವನಿಧಿ ವಿಚಾರದಲ್ಲೂ ಯುವ ಜನರಿಗೆ ಮೋಸ ಆಗಲಿದೆ. ಕೊವೀಡ್ ಬಳಿಕ ಕೆಲಸ ಕಳೆದುಕೊಂಡವರು ಕೂಡ ಯೋಜನೆ ಲಾಭ ಪಡೆಯಲು ಮತ ಹಾಕಿದ್ದರು. ಅವರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments