Webdunia - Bharat's app for daily news and videos

Install App

ಹಣಕ್ಕಾಗಿ ತಂದೆಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಮಗ!?

Webdunia
ಭಾನುವಾರ, 20 ನವೆಂಬರ್ 2022 (09:15 IST)
ಭೋಪಾಲ್ : ತಂದೆ ಹೆಸರಿನಲ್ಲಿರುವ ಅಪಘಾತ ವಿಮೆ ಹಣವನ್ನು ಪಡೆಯುವ ಸಲುವಾಗಿ ಸುಪಾರಿ ಕಿಲ್ಲರ್ಸ್ಗೆ ಹಣ ನೀಡಿ ತಂದೆಯನ್ನೇ ಮಗ ಕೊಲ್ಲಿಸಿರುವ ಘಟನೆ ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ನಡೆದಿದೆ.

ನವೆಂಬರ್ 10 ರಂದು ತನ್ನ 52 ವರ್ಷದ ತಂದೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಸೆಂಧ್ವಾ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದಾನೆ.

ನಂತರ ಅಪಘಾತ ನಡೆದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು ಇದೊಂದು ಕೊಲೆ ಎಂಬ ತೀರ್ಮಾನಕ್ಕೆ ಬಂದರು. ಅಲ್ಲದೇ ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದಾಗ ವ್ಯಕ್ತಿಗೆ ಡಿಕ್ಕಿ ಹೊಡೆದ ವಾಹನ ಕೆಲವು ಸಮಯದಿಂದಲೂ ಒಂದೇ ಸ್ಥಳದಲ್ಲಿ ಸುತ್ತಾಡಿರುವುದು ಕಂಡು ಬಂದಿದೆ.

ವ್ಯಕ್ತಿ ಪ್ರತಿದಿನ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದರು. ಅದೇ ರೀತಿ ನವೆಂಬರ್ 10 ರಂದು ತನ್ನ ತಂದೆ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದಾರೆ ಎಂದು ಆರೋಪಿ ಸುಪಾರಿ ಕಿಲ್ಲರ್ಸ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ ಎಂದು ಸೆಂಧ್ವಾ ಪೊಲೀಸ್ ಠಾಣೆಯ ಉಸ್ತುವಾರಿ ರಾಜೇಶ್ ಯಾದವ್ ಹೇಳಿದ್ದಾರೆ. 

ಘಟನೆ ಬಳಿಕ ಪುಣೆಯಲ್ಲಿ ಕರಣ್ ಶಿಂಧೆ ಎಂಬ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ ವ್ಯಕ್ತಿಯ ಮಗನೇ ತಂದೆಯನ್ನು ಕೊಲೆ ಮಾಡಲು 2.5 ಲಕ್ಷ ರೂಪಾಯಿ ಸುಪಾರಿ ನೀಡಿರುವ ವಿಚಾರ ಬಾಯ್ಬಿಟ್ಟಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments