Webdunia - Bharat's app for daily news and videos

Install App

ಕರ್ನಾಟಕ ಬಸ್ಸುಗಳ ಮೇಲೆ ಕಲ್ಲು ತೂರಾಟ!

Webdunia
ಸೋಮವಾರ, 20 ಡಿಸೆಂಬರ್ 2021 (17:10 IST)
ಯಾದಗಿರಿ : ರಾಜ್ಯದಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರದಲ್ಲಿ ಕೂಡ ಎಂಇಎಸ್ ಕಾರ್ಯಕರ್ತರು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆಯುತ್ತಿದ್ದಾರೆ.
 
ಈ ಹಿನ್ನೆಲೆ ರಾಜ್ಯದಿಂದ ಮಹಾರಾಷ್ಟ್ರಕ್ಕೆ ತೆರಳಿದ ಬಸ್ಗಳು ರಾಜ್ಯಕ್ಕೆ ಮರಳಿದ್ದಾವೆ. ಪ್ರಮುಖವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಯಾದಗಿರಿ ಜಿಲ್ಲೆಯ ಗುರುಮಠಕಲ್, ಶಹಾಪುರ, ಸುರಪುರ, ಯಾದಗಿರಿ ವಿಭಾಗದ ಬಸ್ ಗಳನ್ನು ಮಹಾರಾಷ್ಟ್ರ ದಿಂದ ರಿಟರ್ನ್ ತರಲಾಗಿದೆ.

ನಿನ್ನೆ ತಾನೆ ಶಹಾಪುರ ಡಿಪೋದ ಬಸ್ ಮೇಲೆ ಪುಣೆಯ ಬಸ್ ನಿಲ್ದಾಣದಲ್ಲಿ ಎಂಇಎಸ್ ಕಾರ್ಯಕರ್ತರು ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಬಸ್ ನ ಗ್ಲಾಸ್ ಗಳು ಜಖಂ ಮಾಡಿದ್ದರು. ಅದೇ ರೀತಿ ಚಾಲಕ ಹಾಗೂ ನಿರ್ವಾಹಕರಿಗೆ ಜೀವ ಬೇದರಿಕೆ ಹಾಕಿದ್ದರು.

ಈ ಘಟನೆ ನಂತರ ಮಹಾರಾಷ್ಟ್ರಕ್ಕೆ ತೆರಳಿದ ಬಸ್ ಗಳು ರಾತ್ರೋ ರಾತ್ರಿ ಯಾದಗಿರಿ ಜಿಲ್ಲೆಗೆ ಮರಳಿ ತರಲಾಗಿದೆ. ಜಿಲ್ಲೆಯ 27 ಬಸ್ ಗಳು ರಿಟರ್ನ್ ಬಂದಿವೆ. ಎರಡು ಬಸ್ ಗಳು ಮಾತ್ರ ಇನ್ನೂ ಮಹಾರಾಷ್ಟ್ರದಲ್ಲಿದ್ದು ಇಂದು ರಾತ್ರಿ ರಿಟರ್ನ್ ಆಗುವ ನಿರೀಕ್ಷೆ ಇದೆ. ಎಂಇಎಸ್ ಪುಂಡಾಟ ಹಿನ್ನೆಲೆ ಬಸ್ ಗಳು ಮಹಾರಾಷ್ಟ್ರಕ್ಕೆ ಸಂಚಾರ ಮಾಡದೇ ಇರುವುದರಿಂದ 5 ಲಕ್ಷ ರೂ ನಷ್ಟು ಆದಾಯ ನಷ್ಟವಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments