Webdunia - Bharat's app for daily news and videos

Install App

ಕರ್ನಾಟಕ ಬಸ್ಸುಗಳ ಮೇಲೆ ಕಲ್ಲು ತೂರಾಟ!

Webdunia
ಸೋಮವಾರ, 20 ಡಿಸೆಂಬರ್ 2021 (17:10 IST)
ಯಾದಗಿರಿ : ರಾಜ್ಯದಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರದಲ್ಲಿ ಕೂಡ ಎಂಇಎಸ್ ಕಾರ್ಯಕರ್ತರು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆಯುತ್ತಿದ್ದಾರೆ.
 
ಈ ಹಿನ್ನೆಲೆ ರಾಜ್ಯದಿಂದ ಮಹಾರಾಷ್ಟ್ರಕ್ಕೆ ತೆರಳಿದ ಬಸ್ಗಳು ರಾಜ್ಯಕ್ಕೆ ಮರಳಿದ್ದಾವೆ. ಪ್ರಮುಖವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಯಾದಗಿರಿ ಜಿಲ್ಲೆಯ ಗುರುಮಠಕಲ್, ಶಹಾಪುರ, ಸುರಪುರ, ಯಾದಗಿರಿ ವಿಭಾಗದ ಬಸ್ ಗಳನ್ನು ಮಹಾರಾಷ್ಟ್ರ ದಿಂದ ರಿಟರ್ನ್ ತರಲಾಗಿದೆ.

ನಿನ್ನೆ ತಾನೆ ಶಹಾಪುರ ಡಿಪೋದ ಬಸ್ ಮೇಲೆ ಪುಣೆಯ ಬಸ್ ನಿಲ್ದಾಣದಲ್ಲಿ ಎಂಇಎಸ್ ಕಾರ್ಯಕರ್ತರು ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಬಸ್ ನ ಗ್ಲಾಸ್ ಗಳು ಜಖಂ ಮಾಡಿದ್ದರು. ಅದೇ ರೀತಿ ಚಾಲಕ ಹಾಗೂ ನಿರ್ವಾಹಕರಿಗೆ ಜೀವ ಬೇದರಿಕೆ ಹಾಕಿದ್ದರು.

ಈ ಘಟನೆ ನಂತರ ಮಹಾರಾಷ್ಟ್ರಕ್ಕೆ ತೆರಳಿದ ಬಸ್ ಗಳು ರಾತ್ರೋ ರಾತ್ರಿ ಯಾದಗಿರಿ ಜಿಲ್ಲೆಗೆ ಮರಳಿ ತರಲಾಗಿದೆ. ಜಿಲ್ಲೆಯ 27 ಬಸ್ ಗಳು ರಿಟರ್ನ್ ಬಂದಿವೆ. ಎರಡು ಬಸ್ ಗಳು ಮಾತ್ರ ಇನ್ನೂ ಮಹಾರಾಷ್ಟ್ರದಲ್ಲಿದ್ದು ಇಂದು ರಾತ್ರಿ ರಿಟರ್ನ್ ಆಗುವ ನಿರೀಕ್ಷೆ ಇದೆ. ಎಂಇಎಸ್ ಪುಂಡಾಟ ಹಿನ್ನೆಲೆ ಬಸ್ ಗಳು ಮಹಾರಾಷ್ಟ್ರಕ್ಕೆ ಸಂಚಾರ ಮಾಡದೇ ಇರುವುದರಿಂದ 5 ಲಕ್ಷ ರೂ ನಷ್ಟು ಆದಾಯ ನಷ್ಟವಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments