Webdunia - Bharat's app for daily news and videos

Install App

ಸಿಂಗಾಪುರದಲ್ಲಿ ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ತಮಿಳುನಾಡಿನ ವ್ಯಕ್ತಿಗೆ ಲಕ್ಕಿ ಡ್ರಾದಲ್ಲಿ ₹8 ಕೋಟಿ ಬಹುಮಾನ

Sampriya
ಶನಿವಾರ, 30 ನವೆಂಬರ್ 2024 (14:25 IST)
Photo Courtesy X
ಚೆನ್ನೈ: ಇಲ್ಲಿನ ಜ್ಯುವೇಲರಿ ಮಳಿಗೆಯಲ್ಲಿ ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಾಟರಿಯ ಮೂಲಕ ಬರೋಬ್ಬರಿ ₹8 ಕೋಟಿ ಬಹುಮಾನ ಸಿಕ್ಕಿದೆ.

ಸಿಂಗಪುರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಪ್ರೊಜೆಕ್ಟ್ ಎಂಜಿನಿಯರ್ ಆಗಿರುವ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಎಂಬ ವ್ಯಕ್ತಿಗೆ ಲಕ್ಕಿ ಡ್ರಾದಲ್ಲಿ 1 ಮಿಲಿಯನ್ ಯುಎಸ್ ಡಾಲರ್ ಹಣ (₹8ಕೋಟಿಗೂ ಅಧಿಕ) ದೊರಕಿದೆ.

ಬಾಲಸುಬ್ರಹ್ಮಣ್ಯಂ ಅವರು ನವೆಂಬರ್ 24 ರಂದು ಸಿಂಗಾಪುರದ ಮುಸ್ತಫಾ ಜುವೇಲರಿಯಲ್ಲಿ ಪತ್ನಿಗಾಗಿ ₹84 ಸಾವಿರ ಮೌಲ್ಯದ ಚಿನ್ನದ ಸರವನ್ನು ಖರೀದಿಸಿದ್ದರು. ಇದೇ ವೇಳೆ ಅಂಗಡಿಯಲ್ಲಿ ಚಿನ್ನ ಖರೀದಿಸಿದವರಿಗೆ ಲಕ್ಕಿ ಡ್ರಾ ಬಹುಮಾನ ನಡೆಯುತ್ತಿತ್ತು.

ಅದೃಷ್ಟದಿಂದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಅವರು ಡ್ರಾದಲ್ಲಿ ಗೆದ್ದಿದ್ದಾರೆ. ಈ ವಿಚಾರವನ್ನು ಮುಸ್ತಫಾ ಜುವೇಲರಿ ಅವರು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.

ನನ್ನ ತಂದೆಯ ಪುಣ್ಯಸ್ಮರಣೆಯಂದೇ ನನಗೆ ಈ ಬಹುಮಾನ ಬಂದಿದೆ. ಹಣವನ್ನು ಒಳ್ಳೆಯ ಉದ್ದೇಶಕ್ಕೆ ಬಳಸುತ್ತೇನೆ ಎಂದು ತಮಿಳುನಾಡು ಮೂಲದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments