Webdunia - Bharat's app for daily news and videos

Install App

ಸಿಂಗಾಪುರದಲ್ಲಿ ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ತಮಿಳುನಾಡಿನ ವ್ಯಕ್ತಿಗೆ ಲಕ್ಕಿ ಡ್ರಾದಲ್ಲಿ ₹8 ಕೋಟಿ ಬಹುಮಾನ

Sampriya
ಶನಿವಾರ, 30 ನವೆಂಬರ್ 2024 (14:25 IST)
Photo Courtesy X
ಚೆನ್ನೈ: ಇಲ್ಲಿನ ಜ್ಯುವೇಲರಿ ಮಳಿಗೆಯಲ್ಲಿ ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಾಟರಿಯ ಮೂಲಕ ಬರೋಬ್ಬರಿ ₹8 ಕೋಟಿ ಬಹುಮಾನ ಸಿಕ್ಕಿದೆ.

ಸಿಂಗಪುರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಪ್ರೊಜೆಕ್ಟ್ ಎಂಜಿನಿಯರ್ ಆಗಿರುವ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಎಂಬ ವ್ಯಕ್ತಿಗೆ ಲಕ್ಕಿ ಡ್ರಾದಲ್ಲಿ 1 ಮಿಲಿಯನ್ ಯುಎಸ್ ಡಾಲರ್ ಹಣ (₹8ಕೋಟಿಗೂ ಅಧಿಕ) ದೊರಕಿದೆ.

ಬಾಲಸುಬ್ರಹ್ಮಣ್ಯಂ ಅವರು ನವೆಂಬರ್ 24 ರಂದು ಸಿಂಗಾಪುರದ ಮುಸ್ತಫಾ ಜುವೇಲರಿಯಲ್ಲಿ ಪತ್ನಿಗಾಗಿ ₹84 ಸಾವಿರ ಮೌಲ್ಯದ ಚಿನ್ನದ ಸರವನ್ನು ಖರೀದಿಸಿದ್ದರು. ಇದೇ ವೇಳೆ ಅಂಗಡಿಯಲ್ಲಿ ಚಿನ್ನ ಖರೀದಿಸಿದವರಿಗೆ ಲಕ್ಕಿ ಡ್ರಾ ಬಹುಮಾನ ನಡೆಯುತ್ತಿತ್ತು.

ಅದೃಷ್ಟದಿಂದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಅವರು ಡ್ರಾದಲ್ಲಿ ಗೆದ್ದಿದ್ದಾರೆ. ಈ ವಿಚಾರವನ್ನು ಮುಸ್ತಫಾ ಜುವೇಲರಿ ಅವರು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.

ನನ್ನ ತಂದೆಯ ಪುಣ್ಯಸ್ಮರಣೆಯಂದೇ ನನಗೆ ಈ ಬಹುಮಾನ ಬಂದಿದೆ. ಹಣವನ್ನು ಒಳ್ಳೆಯ ಉದ್ದೇಶಕ್ಕೆ ಬಳಸುತ್ತೇನೆ ಎಂದು ತಮಿಳುನಾಡು ಮೂಲದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments