Webdunia - Bharat's app for daily news and videos

Install App

ಸಿಬಿಎಸ್‌ಇ ಮುಖ್ಯಸ್ಥ ಸ್ಥಾನಕ್ಕೆ ಸಚಿವೆ ಸ್ಮೃತಿ ಇರಾನಿ ಶಿಫಾರಸ್ಸು ತಳ್ಳಿಹಾಕಿದ ಮೋದಿ

Webdunia
ಬುಧವಾರ, 13 ಜುಲೈ 2016 (14:15 IST)
ಸಿಬಿಎಸ್‌ಇ ಮುಖ್ಯಸ್ಥರಾಗಿ ಮಾಜಿ ಮಾನವ ಸಂಪನ್ಮೂಲ ಖಾತೆ ಸಚಿವೆ ಶಿಫಾರಸ್ಸು ಮಾಡಿದ ಅಯ್ಕೆಯನ್ನು ಮುಖ್ಯಮಂತ್ರಿ ನರೇಂದ್ರ ಮೋದಿ ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವರದಿಗಳ ಪ್ರಕಾರ, ಪ್ರಧಾನಮಂತ್ರಿ ನೇತೃತ್ವದ ಸಂಪುಟದ ನೇಮಕಾತಿ ಸಮಿತಿ, ಮಾನವ ಸಂಪನ್ಮೂಲ ಖಾತೆ ಸಚಿವಾಲಯ ಕಳುಹಿಸಿದ್ದ ಸಿಬಿಎಸ್‌ಇ ಮುಖ್ಯಸ್ಥರಾಗಿ ಡಾ.ಸರ್ವೇಂದ್ರ ವಿಕ್ರಂ ಬಹಾದ್ದೂರ್ ಸಿಂಗ್ ಅವರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.   
 
ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಥಾನದಿಂದ ಸ್ಮೃತಿ ಇರಾನಿ ಎತ್ತಂಗಡಿ ಮಾಡಿದ ಕೇವಲ ಒಂದು ವಾರದ ನಂತರ, ಸಂಪುಟದ ನೇಮಕಾತಿ ಸಮಿತಿ  ಹಿಂದೆ ಮಾಡಿರುವ ನೇಮಕಾತಿ ಶಿಫಾರಸ್ಸುಗಳನ್ನು ಪ್ರಸ್ತು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ. 
 
ಸೆಂಟಲ್ ಸ್ಟಾಫಿಂಗ್ ಯೋಜನೆಯಡಿ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಧಾನಮಂತ್ರಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ. 
 
ಡಾ.ಸರ್ವೇಂದ್ರ ವಿಕ್ರಂ ಬಹಾದ್ದೂರ್ ಸಿಂಗ್ ಪ್ರಸ್ತುತ ಉತ್ತರಪ್ರದೇಶದ ಶಿಕ್ಷಣ ಸಚಿವಾಲಯದ ಸೇವೆಯಲ್ಲಿದ್ದು, ರಾಜ್ಯ ಸರಕಾರದ ಪ್ರಸ್ತುತ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ವಿಭಾಗದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಮುಂದಿನ ಸುದ್ದಿ
Show comments