Webdunia - Bharat's app for daily news and videos

Install App

ಮಹಿಳೆಗೆ ಒತ್ತಾಯಪೂರ್ವಕ ಮದ್ಯ ಕುಡಿಸಿ ರೇಪ್

Webdunia
ಸೋಮವಾರ, 11 ಡಿಸೆಂಬರ್ 2023 (12:42 IST)
ಮನೆಗೆಲಸ ಮಾಡಿಕೊಂಡಿದ್ದ 30 ವರ್ಷ ವಯಸ್ಸಿನ ಮಹಿಳೆ  ಲಾರಿಯನ್ನು ಹತ್ತಿದ್ದಾಳೆ. ಲಾರಿ ಚಾಲಕ ಮತ್ತು ಕ್ಲೀನರ್ ಆಕೆಯ ಮೇಲೆ ಅತ್ಯಾಚಾರವೆಸಗಿ ಗ್ರಾಮದ ಬಳಿ ಚಲಿಸುತ್ತಿರುವ ಲಾರಿಯಿಂದ ಕೆಳಕ್ಕೆ ಎಸೆದು ಪರಾರಿಯಾಗಿದ್ದಾರೆ
 
ದೆಹಲಿಯ ನಿರ್ಭಯ್ ರೇಪ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೇಯ ಅತ್ಯಾಚಾರ ಘಟನೆ ವರದಿಯಾಗಿದೆ.ಲಾರಿಯೊಂದರ ಚಾಲಕ ಮತ್ತು ಕ್ಲೀನರ್ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿ ನಗ್ನ ಸ್ಥಿತಿಯಲ್ಲಿಯೇ ಚಲಿಸುತ್ತಿರುವ ಲಾರಿಯಿಂದ ಕೆಳಕ್ಕೆ ಎಸೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ನಗ್ನ ಸ್ಥಿತಿಯಲ್ಲಿ ದೇಹದ ತುಂಬಾ ಗಾಯಗಳೊಂದಿಗೆ ಬೆತ್ತಲೆಯಾಗಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
 
ಬಚಾನ್ನಾಪೇಟ್ ಪೊಲೀಸ್ ಠಾಣೆಯ ಅಧಿಕಾರಿ ಮಾತನಾಡಿ, ಅತ್ಯಾಚಾರಕ್ಕೊಳಗಾದ ಮಹಿಳೆಯ ಮೇಲೆ ಗಂಭೀರವಾದ ಗಾಯಗಳಿವೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಕೆಲ ಗ್ರಾಮಸ್ಥರು ಲಾರಿಯನ್ನು ಹಿಂಬಾಲಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.
 
ಪೊಲೀಸರು ಆರೋಪಿ ಲಾರಿ ಚಾಲಕ ಮತ್ತು ಕ್ಲೀನರ್‌ನನ್ನು ದೇವರುಪ್ಪುಲಾ ಗ್ರಾಮದ ಬಳಿ ಬಂಧಿಸಲಾಗಿದೆ. ಆರೋಪಿ ಚಾಲಕ ಕೃಷ್ಣ ಜಿಲ್ಲೆಯವನಾಗಿದ್ದಾನೆ. ಅತ್ಯಾಚಾರಕ್ಕೊಳಗಾದ ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅತ್ಯಾಚಾರಕ್ಕೊಳಗಾದ ಮಹಿಳೆಗೆ ಲಾರಿ ಚಾಲಕ ಮತ್ತು ಕ್ಲೀನರ್ ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿ ನಂತರ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ