Webdunia - Bharat's app for daily news and videos

Install App

ಫೋನ್ ಕಿತ್ಕೋತಿಯಾ ಎಂದು ಗಂಡನ ಮೇಲೆ ಸಿಟ್ಟಿಗೆದ್ದ ಮಹಿಳೆ ಖತರ್ನಾಕ್ ಕೃತ್ಯ ಮಾಡಿದಳು

sampriya
ಶುಕ್ರವಾರ, 31 ಮೇ 2024 (16:57 IST)
Photo By X
ಆಗ್ರಾ:  ಮೊಬೈಲ್‌ ಕಿತ್ಕೋಡಿದ್ದಕ್ಕೆ ಕೋಪಗೊಂಡ ಪತ್ನಿಯೊಬ್ಬಳು ಪತಿಯನ್ನು ಹಾಸಿಗೆಗೆ ಕಟ್ಟಿ ಹಾಕಿ ವಿದ್ಯುತ್ ಶಾಕ್ ನೀಡಿದ ಘಟನೆ ಆಗ್ರಾದಲ್ಲಿ ಬೆಳಕಿಗೆ ಬಂದಿದೆ. ಈ ವೇಳೆ ತನ್ನ ತಂದೆಯನ್ನು ರಕ್ಷಿಸಲು ಮುಂದಾದ ಮಗನ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾಳೆ.

ವರದಿಯ ಪ್ರಕಾರ,  ಪ್ರದೀಪ್ ಸಿಂಗ್ 2007 ರಲ್ಲಿ ಬೇಬಿ ಯಾದವ್ ಅವರನ್ನು ವಿವಾಹವಾಗಿದ್ದಾರೆ. ಇತ್ತೀಚೆಗಷ್ಟೇ ತನ್ನ ಪತ್ನಿ ಯಾರೊಂದಿಗೆ ಮಾತನಾಡುತ್ತಿರುವುದನ್ನು ಗಮನಿಸಿ , ಆಕೆಯ ಫೋನನ್ನು ಕಿತ್ಕೋಡು ನೋಡಿದ್ದಾರೆ. ಇದರಿಂದ ಕೋಪಗೊಂಡ ಪತ್ನಿ ಬೇಬಿ ಅವರು ಪ್ರದೀಪ್‌ ಅವರನ್ನು ಮಂಚಕ್ಕೆ ಕಟ್ಟಿ ಹಾಕಿ  ವಿದ್ಯುತ್‌ ಶಾಕ್‌ ನೀಡಿದ್ದಾಳೆ. ಅವರ 14 ವರ್ಷದ ಮಗ ತನ್ನ ತಂದೆಯನ್ನು ರಕ್ಷಿಸಲು ಮಧ್ಯಪ್ರವೇಶಿಸಿದಾಗ ಆತನ ಮೇಲೂ ಹಲ್ಲೆ ನಡೆಸಿದ್ದಾರೆ. ಪ್ರಸ್ತುತ ತಂದೆ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೂರಿನಲ್ಲಿ ಹೀಗಿದೆ:  ನನ್ನ ಹೆಂಡತಿ ಪ್ರತಿದಿನ ಯಾರೊಂದಿಗಾದರೂ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದಳು, ನಾನು ಅದನ್ನು ವಿರೋಧಿಸಿ ಅವಳ ಮನೆಯವರಿಗೆ ತಿಳಿಸಿದ್ದೇನೆ. ಅವರ ಕೋರಿಕೆಯ ಮೇರೆಗೆ ನಾನು ಅವಳ ಮೊಬೈಲ್ ಫೋನ್ ತೆಗೆದುಕೊಂಡೆ. ಇದರಿಂದ ಕೋಪಗೊಂಡ ಅವಳು ನನಗೆ ಮತ್ತು ನನ್ನ ಮಗನಿಗೆ ಕೊಲೆ ಬೆದರಿಕೆ ಹಾಕಿದಳು. ಮೇ 18 ರ ರಾತ್ರಿ, ಅವಳು ನನ್ನನ್ನು ಕ್ರೂರ ಚಿತ್ರಹಿಂಸೆಗೆ ಒಳಪಡಿಸಿದಳು, ನನ್ನ ಮಗ ಮಧ್ಯಪ್ರವೇಶಿಸಿ ನನ್ನನ್ನು ಉಳಿಸಲು ಪ್ರಯತ್ನಿಸಿದಾಗ ಅವಳು ನನ್ನ ತಲೆ ಮತ್ತು ದೇಹದ ಮೇಲೆ ತೀವ್ರವಾದ ಗಾಯಗಳನ್ನು ಮಾಡಿದ್ದಾಳೆಂದು ಪ್ರದೀಪ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments