Webdunia - Bharat's app for daily news and videos

Install App

ರೇಪ್ಗೆ ಒಳಗಾದ ಮಹಿಳೆ: ಬೆತ್ತಲಾದ ಸ್ಥಿತಿಯಲ್ಲಿ ಸಹಾಯಕ್ಕೆ ಅಂಗಲಾಚಿದ್ರೂ ಹುಚ್ಚಿ ಎಂದುಕೊಂಡ ಜನ!

Webdunia
ಸೋಮವಾರ, 11 ಸೆಪ್ಟಂಬರ್ 2023 (10:01 IST)
ಜೈಪುರ : ಗ್ಯಾಂಗ್ ರೇಪ್ಗೆ ಒಳಗಾಗಿದ್ದ ಮಹಿಳೆ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಹೋಗಿದ್ದಾಳೆ. ಆದರೆ ಬೆತ್ತಲಾಗಿದ್ದ ಕಾರಣದಿಂದ ಆಕೆ ಜನರಲ್ಲಿ ಸಹಾಯ ಕೇಳಿದರೂ ಆಕೆಯನ್ನು ಜನರು ಹುಚ್ಚಿ ಎಂದುಕೊಂಡು ಕಡೆಗಣಿಸಿರುವ ಘಟನೆ ರಾಜಸ್ಥಾನದ ಭಿಲ್ವಾರದಲ್ಲಿ ಶನಿವಾರ ನಡೆದಿದೆ.
 
ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ತನ್ನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೊದಲಿಗೆ ದೈಹಿಕ ಹಿಂಸೆ ನೀಡಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.

ತನ್ನ ಮೇಲೆ ಅತ್ಯಾಚಾರ ಆಗಿದ್ದರೂ ಮಹಿಳೆ ಘಟನಾ ಸ್ಥಳದಿಂದ ತಪ್ಪಿಸಿಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದಾಳೆ. ಆದರೆ ತನ್ನ ಬಟ್ಟೆಗಳನ್ನು ತೆಗೆದುಕೊಂಡು ಹೋಗಲು ಸಾಧ್ಯವಾಗದೇ ಹೋಗಿದ್ದರಿಂದ ಆಕೆ ಬೆತ್ತಲಾಗಿ ಬೀದಿಗಳಲ್ಲಿ ಜನರಲ್ಲಿ ಸಹಾಯಕ್ಕಾಗಿ ಅಂಗಲಾಚಿದ್ದಾಳೆ. ಆದರೆ ಜನರು ಆಕೆಯನ್ನು ಹುಚ್ಚಿ ಎಂದುಕೊಂಡು ಸಹಾಯ ಮಾಡಲು ನಿರಾಕರಿಸಿದ್ದಾರೆ. 

ಗಂಟೆಗಳ ವರೆಗೆ ಮಹಿಳೆ ಸಹಾಯಕ್ಕಾಗಿ ಜನರಲ್ಲಿ ಬೇಡಿಕೊಂಡಿದ್ದಾಳೆ. ಕೊನೆಗೆ ಕೆಲ ಗ್ರಾಮಸ್ಥರು ಆಕೆಯ ದೇಹವನ್ನು ಮುಚ್ಚಲು ಬಟ್ಟೆಗಳನ್ನು ನೀಡಿದ್ದಾರೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮಹಿಳೆ ಆರೋಪಿಗಳಲ್ಲಿ ಒಬ್ಬನ ಪರಿಚಯವಿರುವುದಾಗಿ ತಿಳಿಸಿದ್ದಾಳೆ. ಆಕೆಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಆರೋಪಿಗಳಾದ ಛೋಟು (42) ಹಾಗೂ ಗಿರ್ಧಾರಿಯನ್ನು (30) ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments