ಪ್ರಾಣಿಗಳನ್ನು ರೈಲಿನಲ್ಲಿ ಸಾಗಿಸುತ್ತಿದ್ದ ಮಹಿಳೆ ಸಿಕ್ಕಿಬಿದ್ಲು

Webdunia
ಬುಧವಾರ, 9 ನವೆಂಬರ್ 2022 (09:01 IST)
ನವದೆಹಲಿ : ಪೆಟ್ಟಿಗೆಯೊಂದರಲ್ಲಿ ಸುಮಾರು 30 ಹೆಬ್ಬಾವುಗಳ ಸೇರಿದಂತೆ ಅಪರೂಪದ ಇತರ ಪ್ರಾಣಿಗಳನ್ನು ರೈಲಿನ ಮೂಲಕ ಸಾಗಿಸುತ್ತಿದ್ದ ಮಹಿಳೆ ಅಧಿಕಾರಿಗಳ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
 
ಮಹಿಳೆ ಸುಮಾರು 50 ಕೋಟಿ ರೂ. ಬೆಲೆಬಾಳುವ ಪ್ರಾಣಿಗಳನ್ನು ಸಾಗಿಸುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಅತಿಥಿಯಾಗಿರುವ ಮಹಿಳೆ ಪುಣೆ ಮೂಲದ ದೇವಿ ಚಂದ್ರ ಎಂಬುದು ತಿಳಿದುಬಂದಿದೆ. ಆಕೆ ಖರಗ್ಪುರದ ಹಿಜ್ಲಿಯಿಂದ ದೆಹಲಿಗೆ ನೀಲಾಚಲ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾಳೆ.

ರಹಸ್ಯ ಮೂಲಗಳಿಂದ ಮಾಹಿತಿ ಪಡೆದ ರೈಲ್ವೇ ಪೊಲೀಸರು ಹಾಗೂ ಅರಣ್ಯ ಇಲಾಖೆಯ ತಂಡ ನೀಲಾಚಲ ಎಕ್ಸ್ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ಈ ವೇಳೆ ಮಹಿಳೆ ತಂದಿದ್ದ ಸಾಮಾನ್ಯ ಪೆಟ್ಟಿಗೆಯನ್ನು ತೆರೆದು ನೋಡಿದಾಗ ಸಹ ಪ್ರಯಾಣಿಕರು ದಂಗಾಗಿದ್ದಾರೆ.

ಪೆಟ್ಟಿಗೆಯಲ್ಲಿ 30 ಹೆಬ್ಬಾವು, ಜೇಡಗಳು, ಗೋಸುಂಬೆಗಳು, ಜೀರುಂಡೆ ಹೀಗೆ ಅನೇಕ ಜಾತಿಯ ಪ್ರಾಣಿಗಳು ಪತ್ತೆಯಾಗಿವೆ. ಈ ಎಲ್ಲಾ ಪ್ರಾಣಿಗಳೂ ಅತ್ಯಂತ ಅಪರೂಪದ ಪ್ರಭೇದಕ್ಕೆ ಸೇರಿದ್ದಾಗಿದ್ದು, ದುಬಾರಿ ಬೆಲೆಯದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments