Webdunia - Bharat's app for daily news and videos

Install App

ಮೊಬೈಲ್ ಜಾಸ್ತಿ ಬಳಸ್ಬೇಡ ಅಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಯುವತಿ!

Webdunia
ಗುರುವಾರ, 20 ಜುಲೈ 2023 (09:07 IST)
ಛತ್ತೀಸ್ಗಢ : ಇತ್ತೀಚೆಗೆ ಮಕಕ್ಳಿಂದ ಹಿಡಿದು ವೃದ್ಧರವರೆಗೂ ಮೊಬೈಲ್ ಬಳಕೆಯಾಗುತ್ತಿದೆ. ಈ ಮೊಬೈಲ್ ಬಳಕೆಯನ್ನು ಮಕ್ಕಳು ಅತಿಯಾಗಿ ಮಾಡಿದರೆ ಪೋಷಕರು ಬುದ್ಧಿ ಮಾತು ಹೇಳುವುದು ಸಹಜ.

ಆದರೆ ಇದನ್ನೇ ನೆಪವಾಗಿಟ್ಟುಕೊಂಡು ಮಕ್ಕಳು ತಪ್ಪು ನಿರ್ಧಾರ ತೆಗೆದುಕೊಳ್ಳುವ ಘಟನೆ ಈ ಹಿಂದೆಯೂ ನಡೆದಿದೆ. ಇಂಥದ್ದೇ ಘಟನೆಯೊಂದು ಇದೀಗ ಛತ್ತೀಸ್ಗಢದಲ್ಲಿಯೂ ನಡೆದಿದೆ.

ಹೌದು. ಛತ್ತೀಸ್ಗಢದ ಬಸ್ತಾರ್ನಲ್ಲಿ ಯುವತಿಯೊಬ್ಬಳಿಗೆ ಆಕೆಯ ಪೋಷಕರು ಮೊಬೈಲ್ ಜಾಸ್ತಿ ಬಳಕೆ ಮಾಡದಂತೆ ಬುದ್ಧಿ ಮಾತು ಹೇಳಿದ್ದಾರೆ. ಇಷ್ಟಕ್ಕೆ ಬೇಸರಗೊಂಡ ಆಕೆ 90 ಅಡಿ ಆಳದ ಚಿತ್ರಕೋಟೆ ಜಲಪಾತಕ್ಕೆ ಧುಮುಕಿದ್ದಾಳೆ.

ಜಲಪಾತದ ಬಳಿಗೆ ಬಂದ ಬಳಿಕ ಯುವತಿ ಸ್ವಲ್ಪ ಹೊತ್ತು ಆ ಕಡೆ ಈ ಕಡೆ ಅಲೆದಾಡುತ್ತಿದ್ದಳು. ಇದನ್ನು ಗಮನಿಸಿದ ಸ್ಥಳದಲ್ಲಿದ್ದವರು ಆಕೆಯನ್ನು ಅಲ್ಲಿಂದ ರಕ್ಷಣೆ ಮಾಡಲು ಮನವಿ ಮಾಡಿದರು. ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ಆಕೆಗೂ ಒತ್ತಾಯಿಸಿದರು. ಆದರೆ ಅವರ ಮಾತುಗಳನ್ನು ಯುವತಿ ಕೇಳಿಸಿಕೊಳ್ಳದೇ ಒತ್ತಡಕ್ಕೆ ಒಳಗಾದವಳಂತೆ ಓಡಾಡುತ್ತಿದ್ದಳು.

ಇತ್ತ ಸ್ಥಳದಲ್ಲಿದ್ದ ಕೆಲವು ಯುವಕರು ತಮ್ಮ ಮೊಬೈಲ್ ಫೋನ್ಗಳಲ್ಲಿ ಇಡೀ ಘಟನೆಯ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಕೂಡಲೇ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದು, ಈ ವೀಡಿಯೋ ಸದ್ಯ ವೈರಲ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments