Webdunia - Bharat's app for daily news and videos

Install App

ಯುಟ್ಯೂಬ್ ನೋಡಿ ಗರ್ಭಪಾತ ಮಾಡಿಕೊಳ್ಳಲು ಮುಂದಾದ ಯುವತಿ.. ಮುಂದೇನಾಯ್ತು?

Webdunia
ಬುಧವಾರ, 29 ಸೆಪ್ಟಂಬರ್ 2021 (09:15 IST)
ಇಂದು ಏನೇ ಹೊಸ ಕೆಲಸ ಮಾಡಬೇಕು ಅಂದ್ರೆ ಒಮ್ಮೆ ಯುಟ್ಯೂಬ್ ನೋಡುತ್ತೇವೆ. ಹೊಸ ಮೊಬೈಲ್, ಕಾರ್, ಬೈಕ್ ಸೇರಿದಂತೆ ಎಲ್ಲ ತರಹದ ಮಾಹಿತಿ ಪಡೆಯಲು ಯುಟ್ಯೂಬ್ ಸಹಾಯ ಪಡೆದುಕೊಳ್ಳುತ್ತೇವೆ.

ಹೆಚ್ಚಿನ ಜನರು ಹೊಸ ಅಡುಗೆ ಮಾಡೋದಕ್ಕಾಗಿ ಯುಟ್ಯೂಬ್ ತಡಕಾಡುತ್ತಾರೆ. ಆದ್ರೆ ನಾಗ್ಪುರದ 25 ವರ್ಷದ ಯುವತಿಯೊಬ್ಬಳು ಯುಟ್ಯೂಬ್ ನೋಡಿ ಆಬಾರ್ಷನ್ ಮಾಡಿಕೊಳ್ಳಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಳು. ಸರಿಯಾದ ಸಮಯಕ್ಕೆ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರಿಂದ ಬದುಕುಳಿದಿದ್ದಾಳೆ.
ಯುಟ್ಯೂಬ್ ಸಲಹೆ ನೀಡಿದ್ದು ಆಕೆಯ ಇನಿಯ
ಸ್ಥಳೀಯ ಪತ್ರಿಕೆಗಳ ವರದಿ ಪ್ರಕಾರ, ಯುಟ್ಯೂಬ್ ನೋಡಿ ಭ್ರೂಣವನ್ನು ಹೊರತೆಗೆಯಲು ಯುವತಿಗೆ ಆಕೆಯ ಗೆಳೆಯ ಸಲಹೆ ನೀಡಿದ್ದನು. ಇನಿಯನ ಮಾತು ನಂಬಿ ಅಬಾರ್ಷನ್ ಗೆ ಮುಂದಾಗಿ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಳು. ಈ ಘಟನೆ ನಾಗ್ಪುರದ ಯಶೋಧರ ನಗರದಲ್ಲಿ ನಡೆದಿದೆ.
ಮಹಾರಾಷ್ಟ್ರದ ನಾಗ್ಪುರ  ಮೂಲದ ಯುವತಿ, 30 ವರ್ಷದ ಶೋಯೆಬ್ ಖಾನ್ ಎಂಬಾತನನ್ನು ಪ್ರೀತಿಸುತಿದ್ದಳು. ಶೋಯೆಬ್ ಖಾನ್ ಮದುವೆಯಾಗೋದಾಗಿ ನಂಬಿಸಿ 2016ರಿಂದಲೂ ಯುವತಿಯ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದ. ಗರ್ಭಿಣಿ ಎಂಬ ವಿಷಯ ತಿಳಿದು ಕೂಡಲೇ ಶೋಯೆಬ್ ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಾಳೆ. ಯುವತಿ ಗರ್ಭಿಣಿ ಎಂಬ ವಿಷಯ ತಿಳಿಯುತ್ತಲೇ ಯುಟ್ಯೂಬ್ ನಲ್ಲಿರುವ ಕೆಲ ವೀಡಿಯೋಗಳ ಮೂಲಕ ಗರ್ಭಪಾತ ಹೇಗೆ ಮಾಡಿಕೊಳ್ಳಬೇಕೆಂದು ತೋರಿಸಿದ್ದಾನೆ. ನಂತರ ಔಷಧಿಯನ್ನು ಸಹ ತಂದು ಕೊಟ್ಟಿದ್ದಾನೆ. ಯುವತಿಗೆ ಗರ್ಭಪಾತ ಮಾಡಿಕೊಳ್ಳುವಂತೆ ಒತ್ತಡ ಹಾಕಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ