Webdunia - Bharat's app for daily news and videos

Install App

ಮರೆಮಾಚಿದ ಆಧಾರ್ ಕಾರ್ಡ್ ಹಂಚಿಕೊಳ್ಳಿ: ಕೇಂದ್ರ ಮಹತ್ವದ ಮಾಹಿತಿ!

Webdunia
ಭಾನುವಾರ, 29 ಮೇ 2022 (14:16 IST)
ಆಧಾರ್ ಕಾರ್ಡ್ ದುರುಪಯೋಗ ತಡೆಗಟ್ಟಲು ನಾಗರಿಕರು ಸಂಪೂರ್ಣ ಮಾಹಿತಿ ಇರುವ ಆಧಾರ್ ಕಾರ್ಡ್‌ ಕಾಪಿ ಹಂಚಿಕೊಳ್ಳುವ ಬದಲು ಮಸುಕು ಮಾಡಿದ ಆಧಾರ್ ಕಾರ್ಡ್‌ಗಳನ್ನು ಹಂಚಿಕೊಳ್ಳಿ ಎಂದು ಕೇಂದ್ರ ಸರಕಾರ ಸೂಚನೆ ನೀಡಿದೆ.
ಆಧಾರ್ ಕಾರ್ಡ್ ಗಳ ದುರ್ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಪ್ರಾಧಿಕಾರ ಸೂಚನೆ ನೀಡಿದ್ದು, ಆಧಾರ್ ಕಾರ್ಡ್‌ನ ಪ್ರತಿಗಳನ್ನು ಯಾವುದೇ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಬೇಡಿ. ಏಕೆಂದರೆ ಅದು ದುರುಪಯೋಗವಾಗುವ ಸಾಧ್ಯತೆ ಇದೆ. ಅದರ ಬದಲು ಆಧಾರ್ ಕಾರ್ಡ್‌ನ ಕೊನೆಯ 4 ಅಂಕೆಗಳನ್ನು ಮಾತ್ರವೇ ಕಾಣುವಂತೆ ಪೂರ್ಣ ಮಾಹಿತಿ ಮರೆಮಾಚಿದ ಆಧಾರ್ ಅನ್ನು ಮಾತ್ರವೇ ಬಳಸಿ ಎಂದು ಕೇಂದ್ರ ಸರ್ಕಾರ ಭಾನುವಾರ ಸಲಹೆ ನೀಡಿದೆ.
ಕೇಂದ್ರ ಸರ್ಕಾರದ ಸಲಹೆಯೊಂದಿಗೆ, ಪರವಾನಗಿ ಪಡೆಯದ ಖಾಸಗಿ ಸಂಸ್ಥೆಗಳು, ಚಲನಚಿತ್ರ ಮಂದಿರಗಳು ಹಾಗೂ ಹೋಟೆಲ್‌ಗಳಲ್ಲಿ ಆಧಾರ್ ಕಾರ್ಡ್ ಪ್ರತಿಗಳನ್ನು ಸಂಗ್ರಹಿಸಲು ಹಾಗೂ ಇರಿಸಿಕೊಳ್ಳಲು ಅನುಮತಿ ಇಲ್ಲ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಐಎಐ)ದಿಂದ ಪರವಾನಗಿ ಪಡೆದ ಸಂಸ್ಥೆಗಳು ಮಾತ್ರವೇ ಜನರ ಗುರುತನ್ನು ತಿಳಿಯಲು ಆಧಾರ್ ಬಳಸಬಹುದು. ಜನರು ತಮ್ಮ ಆಧಾರ್ ಕಾರ್ಡ್ ಪ್ರತಿಯನ್ನು ಹಂಚಿಕೊಳ್ಳುವ ಮೊದಲು ಆ ಸಂಸ್ಥೆ ಯುಐಡಿಐಎಐ ನಿಂದ ಪರವಾನಗಿ ಪಡೆದಿದೆಯೇ ಎಂಬುದನ್ನು ಪರಿಶೀಲಿಸಲು ಸರ್ಕಾರ ನಾಗರಿಕರಲ್ಲಿ ಕೇಳಿಕೊಂಡಿದೆ.
 ಜನರು ತಮ್ಮ ಆಧಾರ್ ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಲು ಇಂಟರ್‌ನೆಟ್ ಕೆಫೆಗಳಲ್ಲಿ ಸಾರ್ವಜನಿಕ ಕಂಪ್ಯೂಟರ್‌ಗಳನ್ನು ಬಳಸದಂತೆ ಎಚ್ಚರಿಸಿದೆ. ಒಂದು ವೇಳೆ ಬಳಸಿದರೂ ಡೌನ್‌ಲೋಡ್ ಮಾಡಿದ ಎಲ್ಲಾ ಇ-ಆಧಾರ್ ಪ್ರತಿಗಳನ್ನು ಶಾಶ್ವತವಾಗಿ ಅಳಿಸಲು ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments