Webdunia - Bharat's app for daily news and videos

Install App

ಕಾರ್ ಅಪಘಾತ: ಪ್ರಾಣಾಪಾಯದಿಂದ ಪಾರಾದ ಆದಿತ್ಯ ಠಾಕ್ರೆ

Webdunia
ಸೋಮವಾರ, 16 ಜನವರಿ 2017 (08:18 IST)
ಯುವಸೇನೆಯ ಮುಖ್ಯಸ್ಥ ಆದಿತ್ಯ ಠಾಕ್ರೆ ಪ್ರಯಾಣಿಸುತ್ತಿದ್ದ ಕಾರ್‌ಗೆ ವೇಗದಿಂದ ಬರುತ್ತಿದ್ದ ಮತ್ತೊಂದು ವಾಹನ ಡಿಕ್ಕಿ ಹೊಡೆದ ಘಟನೆ ಮುಂಬೈನಲ್ಲಿ ನಡೆದಿದೆ. ಬಾಂದ್ರಾದಲ್ಲಿರುವ ಠಾಕ್ರೆ ನಿವಾಸದ ಬಳಿಯಲ್ಲೇ ಈ ದುರ್ಘಟನೆ ನಡೆದಿದ್ದು ಅದೃಷ್ಟವಶಾತ್ ಆದಿತ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
 

 
ಶಿವಸೇನೆಯ ಅಧ್ಯಕ್ಷ ಉದ್ಧವ್ ಠಾಕ್ರೆ ಪುತ್ರರಾದ ಆದಿತ್ಯ (26) ಈ ಅವಘಡದ ಬಗ್ಗೆ ಟ್ವೀಟ್ ಮಾಡಿದ್ದು, ತಾವು ಸುರಕ್ಷಿತವಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. 
 
"ನಿಮ್ಮ ಕಾಳಜಿ ಮತ್ತು ಫೋನ್ ಕರೆಗಳಿಗೆ ಧನ್ಯವಾದಗಳು. ವೇಗವಾಗಿ ಬರುತ್ತಿದ್ದ ಕಾರೊಂದು ಕಲಾನಗರ ಜಂಕ್ಷನ್ ನನ್ನ ಕಾರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತವಾಯ್ತು. ನಾನು ಸುರಕ್ಷಿತವಾಗಿದ್ದೇನೆ ", ಎಂದು ಆದಿತ್ಯ ಟ್ವೀಟ್ ಮಾಡಿದ್ದಾರೆ.
 
ಠಾಕ್ರೆ ಕುಟುಂಬ ಬಾಂದ್ರಾದ ಕಲಾನಗರ ಪ್ರದೇಶದಲ್ಲಿರುವ 'ಮಾತೋಶ್ರೀ' ಬಂಗಲೆಯಲ್ಲಿ ವಾಸವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments