Webdunia - Bharat's app for daily news and videos

Install App

ಎಎಪಿ ಸಂಸದೆ ಸ್ವಾತಿ ಮಾಲಿವಾಲ್‌ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್‌ ಕುಮಾರ್ ಪೊಲೀಸ್‌ ವಶಕ್ಕೆ

Sampriya
ಶನಿವಾರ, 18 ಮೇ 2024 (14:37 IST)
Photo Courtesy X
ನವದೆಹಲಿ: ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್‌ ಕುಮಾರ್ ಅವರನ್ನು ಶನಿವಾರ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಭವ್‌ ಕುಮಾರ್ ಕಪಾಳಕ್ಕೆ ಹಲವು ಬಾರಿ ಹೊಡೆದು, ಕಾಲಿನಿಂದ ಒದ್ದು ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಾಲಿವಾಲ್ ದೂರು ನೀಡಿದ್ದರು.

ಬಿಭವ್‌ ವಿರುದ್ಧ ದೆಹಲಿ ಪೊಲೀಸರು ಗುರುವಾರವೇ ಎಫ್‌ಐಆರ್ ದಾಖಲಿಸಿದ್ದಾರೆ. ಬಿಭವ್‌ ಕುಮಾರ್ ಅವರನ್ನು ಆರೋಪಿ ಎಂದು ಉಲ್ಲೇಖಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ನ್ಯಾಯಾಧೀಶರ ಎದುರು ಮಾಲಿವಾಲ್ ಹೇಳಿಕೆ ನೀಡಿದ್ದರು.

ಮೇ 13ರಂದು ದೆಹಲಿಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿದ್ದ ಸ್ವಾತಿ ಮಾಲಿವಾಲ್, ಕೇಜ್ರಿವಾಲ್ ಅವರ ಮನೆಯಲ್ಲಿ ಅವರ ಆಪ್ತ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದರು.

ನನ್ನ ಎದೆ, ಹೊಟ್ಟೆ ಮತ್ತು ದೇಹದ ಕೆಳಭಾಗಕ್ಕೆ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್‌ ಕುಮಾರ್ ಒದ್ದಿದ್ದಾನೆ. ನನ್ನ ಮೇಲೆ ಸಂಪೂರ್ಣ ಬಲ ಬಳಸಿ ಹಲ್ಲೆ ನಡೆಸಿದ್ದಾನೆ. ಏಳೆಂಟು ಬಾರಿ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಮಾಲಿವಾಲ್ ದೂರಿನಲ್ಲಿ ತಿಳಿಸಿದ್ದರು.

ಈ ಆರೋಪವನ್ನು ತಳ್ಳಿಹಾಕಿರುವ ಬಿಭವ್‌ ಕುಮಾರ್, ಮುಖ್ಯಮಂತ್ರಿಗಳ ನಿವಾಸವನ್ನು ಅಕ್ರಮವಾಗಿ ಪ್ರವೇಶಿಸಿದ್ದ ಅವರನ್ನು ತಡೆಯಲು ನಾನು ಯತ್ನಿಸಿದ್ದಾಗ, ಗದ್ದಲ ಮಾಡಿದ್ದಲ್ಲದೇ ನನ್ನನ್ನು ನಿಂದಿಸಿದ್ದರು ಎಂದು ಪ್ರತಿ ದೂರು ದಾಖಲಿಸಿದ್ದರು.
===<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments