Webdunia - Bharat's app for daily news and videos

Install App

ದೆಹಲಿ ಚುನಾವಣೆಗೆ ಆಮ್‌ ಆದ್ಮಿಗೆ ಸಿಕ್ತು ಆನೆಬಲ: ಕುರುಕ್ಷೇತ್ರದಲ್ಲಿ ಏಕಾಂಗಿಯಾದ ಕಾಂಗ್ರೆಸ್‌

Sampriya
ಭಾನುವಾರ, 12 ಜನವರಿ 2025 (11:27 IST)
Photo Courtesy X
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷವನ್ನು (ಎಎಪಿ) ಬೆಂಬಲಿಸುವುದಾಗಿ ರಾಜಸ್ಥಾನ ಸಂಸದ ಹುನಮಾನ್‌ ಬೆನಿವಾಲ್‌ ಅವರ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ) ಘೋಷಿಸಿದೆ. ಇದರಿಂದ ಎಎಪಿ ಪಕ್ಷಕ್ಕೆ ಆನೆಬಲ ಬಂದಂತಾಗಿದೆ.

ರಾಜ್ಯಸಭೆಯಲ್ಲಿ ಎಎಪಿ ನಾಯಕರಾಗಿರುವ ಸಂಜಯ್‌ ಸಿಂಗ್‌ ಅವರನ್ನು ನಗರದಲ್ಲಿ ಭೇಟಿಯಾದ ಬಳಿಕ ಬೆನಿವಾಲ್‌ ಅವರು ತಮ್ಮ ಪಕ್ಷದ ನಿಲುವು ಪ್ರಕಟಿಸಿದ್ದಾರೆ. ಅದರೊಂದಿಗೆ, ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷಗಳ (ಎಸ್‌ಪಿ) ಹಾದಿಯಲ್ಲಿ ಎಎಪಿ ಸಾಗಿದೆ.

ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರು, ದೇಶದಾದ್ಯಂತ ಮೀಸಲಾತಿ ಪಟ್ಟಿಯಲ್ಲಿ ಜಾಟ್‌ ಸಮುದಾಯವನ್ನು ಒಬಿಸಿ ವರ್ಗಕ್ಕೆ ಸೇರಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸುತ್ತಿದ್ದಾರೆ. ಇದಕ್ಕೆ, ಬೆನಿವಾಲ್ ಬೆಂಬಲ ಸೂಚಿಸಿದ್ದಾರೆ.

ಕಾಂಗ್ರೆಸ್‌ ಪಕ್ಷವು, ಹಲವು ವರ್ಷಗಳಿಂದ ಯಾವುದೇ ಸ್ಥಾನಗಳನ್ನು ಗೆಲ್ಲಲು ವಿಫಲವಾಗಿದೆ. ಹೀಗಾಗಿ, ದೆಹಲಿ ಚುನಾವಣೆಯಲ್ಲಿ ಎಎಪಿ ವಿರುದ್ಧ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕಿತ್ತು ಎಂದು ಬೆನಿವಾಲ್‌ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್‌ ಠಾಕ್ರೆ ಅವರ ಶಿವಸೇನಾ (ಯುಬಿಟಿ) ಸಹ ಈಗಾಗಲೇ ಎಎಪಿಗೆ ಬೆಂಬಲ ಸೂಚಿಸಿದೆ. ಟಿಎಂಸಿ ಮತ್ತು ಎಸ್‌ಪಿಯೂ ಈಗಾಗಲೇ ಈ ತೀರ್ಮಾನ ಮಾಡಿವೆ. ಇದರೊಂದಿಗೆ, ಇಂಡಿಯಾ ಮೈತ್ರಿಕೂಟದಲ್ಲಿರುವ ಪ್ರಮುಖ ಪಕ್ಷ ಕಾಂಗ್ರೆಸ್‌ ಭಾರಿ ಹಿನ್ನಡೆ ಎದುರಾದಂತಾಗಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಮೂರು ದಿನಗಳ ಬಳಿಕ (ಜ.8ರಂದು) ಫಲಿತಾಂಶ ಪ್ರಕಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

ಮುಂದಿನ ಸುದ್ದಿ
Show comments