Webdunia - Bharat's app for daily news and videos

Install App

ಆಮ್ ಆದ್ಮಿ ಪಕ್ಷದಲ್ಲೀಗ ಆಂತರಿಕ ಕಲಹ

Webdunia
ಬುಧವಾರ, 3 ಮೇ 2017 (07:58 IST)
ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಸೋತ ಮೇಲೆ ಎಲ್ಲವೂ ಸರಿಯಿಲ್ಲ ಎನ್ನುವುದು ಬಹಿರಂಗವಾಗಿದೆ. ನಾಯಕತ್ವದ ವಿರುದ್ಧ ಕುಮಾರ್ ವಿಶ್ವಾಸ್ ತಿರುಗಿಬಿದ್ದಿದ್ದಾರೆ.

 
ತನ್ನ ವಿರುದ್ಧ ಪಕ್ಷದ ನಾಯಕರೇ ಕುತಂತ್ರ ನಡೆಸುತ್ತಿದ್ದಾರೆಂದು ವಿಶ್ವಾಸ್ ಆರೋಪ ಮಾಡಿದ್ದು, ಪಕ್ಷ ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಸದ್ಯದಲ್ಲೇ ತನ್ನ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಮಾಡುವುದಾಗಿ ಎಚ್ಚರಿಸಿದ್ದಾರೆ.

ವಿಶ್ವಾಸ್ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿಎಂ ಕೇಜ್ರಿವಾಲ್ ಅವರನ್ನು ಸಮಾಧಾನಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ದೆಹಲಿ ಸೋಲಿನ ನಂತರ ಅವರು ಪಕ್ಷದ ಚುಕ್ಕಾಣಿ ಹಿಡಿಯಲು ಬಯಸಿದ್ದರು ಎಂಬ ಸುದ್ದಿ ಹಬ್ಬಿತ್ತು.

ಅದನ್ನು ಅವರು ನಿರಾಕರಿಸಿದ್ದಾರೆ.  ಅಲ್ಲದೆ ತಾನು ಯಾವುದೇ ಆಂದೋಲನ ಅಥವಾ ಬೇರೆ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಕೇಜ್ರಿವಾಲ್ ಅವರನ್ನು ತಣ್ಣಗಾಗಿಸುವ ಯತ್ನ ಮಾಡಿದ್ದಾರೆ. ವಿಶ್ವಾಸ್ ಪಕ್ಷದ ಪ್ರಮುಖ ಆಸ್ತಿ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments