ಆಮ್ ಆದ್ಮಿ ಆಂತರಿಕ ಬೇಗುದಿ ತಾತ್ಕಾಲಿಕ ಶಮನ: ಕುಮಾರ್ ವಿಶ್ವಾಸ್`ಗೆ ರಾಜಸ್ಥಾನ ಹೊಣೆ

Webdunia
ಬುಧವಾರ, 3 ಮೇ 2017 (20:48 IST)
ಆಮ್ ಆದ್ಮಿ ಪಕ್ಷದ ಆಂತರಿಕ ಬೇಗುದಿಗೆ ಅಲ್ಪ ವಿರಾಮ ಬಿದ್ದಿದೆ. ದೆಹಲಿ ಸ್ಥಳೀಯ ಸಂಸ್ಥೆ ಚುನಾವಣೆ ಸೋಲಿನ ಬಳಿಕ ತಮ್ಮ ವಿರುದ್ಧವೇ ಬಂಡೆದಿದ್ದ ಕುಮಾರ್ ವಿಶ್ವಾಸ್ ಅವರನ್ನ ಸಮಾಧಾನಗೊಳಿಸುವಲ್ಲಿ ಕೇಜ್ರಿವಾಲ್ ಯಶಸ್ವಿಯಾಗಿದ್ದಾರೆ. ದೆಹಲಿಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಚರ್ಚೆ ಬಳಿಕ ಉಭಯ ನಾಯಕರೂ ಭಿನ್ನಾಭಿಪ್ರಾಯ ಬದಿಗೊತ್ತಿ ಒಂದಾಗಿದ್ದಾರೆ.  

ಈ ಮಧ್ಯೆ, ಕುಮಾರ್ ವಿಶ್ವಾಸ್ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದ ಶಾಸಕ ಅಮಾನತುಲ್ಲಾ ಖಾನ್ ಅವರನ್ನ ಪಕ್ಷದಿಂದ ಅಮಾನತು ಮಾಡಿ, ಅವರ ನೀಡಿರುವ ಹೇಳಿಕೆ ಮತ್ತು ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಕುಮಾರ್ ವಿಶ್ವಾಸ್ ಅವರನ್ನ ರಾಜಸ್ಥಾನದ ವಿಧಾನಸಭಾ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಒಟ್ಟಿನಲ್ಲಿ, ಆಮ್ ಆದ್ಮಿ ಪಕ್ಷದಲ್ಲಿ ಕುದಿಯುತ್ತಿದ್ದ ಆಂತರಿಕ ಬೇಗುದಿ ಬುಸುಗುಟ್ಟಿ ಸುಮ್ಮನಾಗಿದೆ. ಸದ್ಯಕ್ಕೆ, ಪಕ್ಷದ ಭಿನ್ನಮತವನ್ನ ಅಡಗಿಸಲಾಗಿದೆ.ಸಾಮಾಜಿಕ ಹೋರಾಟದ ಮೂಲಕ ಅಸ್ತಿತ್ವಕ್ಕೆ ಬಂದ ಆಮ್ ಆದ್ಮಿ ಪಕ್ಷ ಭಿನ್ನಮತ ಬಿಟ್ಟು ಜನಸೇವೆಗೆ ಮುಂದಾದಲ್ಲಿ ಮಾತ್ರ ಅಸ್ತಿತ್ವ ಉಳಿಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments