ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಗೆ ಪಕ್ಷದ ಕಾರ್ಯಕರ್ತೆಯೇ ಕಪಾಳ ಮೋಕ್ಷ ಮಾಡಿದ ಘಟನೆ ವರದಿಯಾಗಿದೆ.
ದೆಹಲಿ ಮಹಾನಗರ ಪಾಲಿಕ್ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಪ್ರಸ್ತಾಪಿಸಲು ಬಿಡದ್ದಕ್ಕೆ ಈ ಕೆಲಸ ಮಾಡಿದೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. ಹಲವು ಬಾರಿ ವಿಷಯ ಪ್ರಸ್ತಾಪಿಸಲು ಯತ್ನಿಸಿದಾಗಲೂ ಅವಕಾಶ ನೀಡಲಿಲ್ಲ ಎಂದು ಕಪಾಳ ಮೋಕ್ಷ ಮಾಡಿದ ಸಿಮ್ರಾನ್ ಬೇಡಿ ಹೇಳಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ವಕ್ತಾರರು, ಇದು ನಿಜಕ್ಕೂ ಮುಜುಗುರ ತರುವ ಘಟನೆ. ಇಂತಹ ಯಾವುದೇ ದೈಹಿಕ ಹಲ್ಲೆಯನ್ನು ನಾವು ಪ್ರೋತ್ಸಾಹಿಸುವುದಿಲ್ಲ. ಇದ್ಯಾವುದೂ ನಮ್ಮ ಗೆಲುವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ