ಆಮ್ ಆದ್ಮಿ ಪಕ್ಷ- ನವಜೋತ್ ಸಿಂಗ್ ಸಿದ್ದು ಡೀಲ್ ಫೇಲ್

Webdunia
ಬುಧವಾರ, 17 ಆಗಸ್ಟ್ 2016 (20:00 IST)
ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಕುರಿತಂತೆ ನಡೆದ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ  ರಾಜ್ಯಸಭೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿದ್ದು ತಮ್ಮ ನಿರ್ಧಾರವನ್ನು ತಡೆಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಪಂಜಾಬ್‌ನಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ನೀಡಿದ ಆದೇಶದಿಂದ ಅಸಮಾಧಾನಗೊಂಡಿದ್ದ ಸಿದ್ದು ಜುಲೈ 18 ರಂದು ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆಗಸ್ಟ್ 12 ರಂದು ಆಪ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳು ಹರಿದಾಡುತ್ತಿದ್ದವು.
 
ಪಂಜಾಬ್ ರಾಜ್ಯದಲ್ಲಿ ಶಿರೋಮಣಿ ಅಕಾಲಿ ದಳದೊಂದಿಗೆ ಮೈತ್ರಿ ಹೊಂದಿರುವ ಬಿಜೆಪಿಗೆ ನವಜೋತ್ ಸಿಂಗ್ ರಾಜೀನಾಮೆ ಹಿನ್ನೆಡೆಯಾಗಿತ್ತು. ಸಿದ್ದು ಮುಂದೆ ಯಾವ ಪಕ್ಷ ಸೇರಲಿದ್ದಾರೆ ಎನ್ನುವ ಉಹಾಪೋಹಗಳು ಹರಿದಾಡುತ್ತಿದ್ದವು. ಕಾಂಗ್ರೆಸ್ ಪಕ್ಷ ಕೂಡಾ ಪಕ್ಷಕ್ಕೆ ಸೆಳೆದುಕೊಳ್ಳಲು ಸಜ್ಜಾಗಿತ್ತು. 
 
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೂಡಾ ಸಿದ್ದು ರಾಜೀನಾಮೆ ನಿರ್ಧಾರವನ್ನು ಸ್ವಾಗತಿಸಿದ್ದರು. ಸಿದ್ದು ಆಪ್ ಪಕ್ಷ ಸೇರುವುದಾದರೇ ಚರ್ಚೆಗೆ ಸಿದ್ದ ಎನ್ನುವಂತೆ ಹೇಳಿಕೆ ನೀಡಿದ್ದರು. 
 
ಮೂಲಗಳ ಪ್ರಕಾರ, ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪಕ್ಷದ ಮುಖ್ಯಮಂತ್ರಿಯಾಗಿ ಘೋಷಿಸಬೇಕು ಮತ್ತು ತಮ್ಮ ಪತ್ನಿ ಡಾ.ನವಜೋತ್ ಕೌರ್ ಸಿದ್ದು ಅವರಿಗೆ ಪಕ್ಷದ ಟಿಕೆಟ್ ನೀಡಬೇಕು ಎನ್ನುವ ಷರತ್ತು ನವಜೋತ್ ಸಿದ್ದು ಒಡ್ಡಿದ್ದಾರೆ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments