Webdunia - Bharat's app for daily news and videos

Install App

ಕಳಂಕಿತ ಬಿಜೆಪಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಆಪ್ ಧರಣಿ

Webdunia
ಸೋಮವಾರ, 29 ಜೂನ್ 2015 (12:55 IST)
ಲಲಿತ್ ಮೋದಿಯವರಿಗೆ ನೆರವು ನೀಡಿರುವ ಆರೋಪವನ್ನೆದುರಿಸುತ್ತಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ ಮತ್ತು ವಿದ್ಯಾರ್ಹತೆಗೆ ಸಂಬಂಧಪಟ್ಟ ಸುಳ್ಳು ಹೇಳಿದ ಆರೋಪಗಳನ್ನೆದುರಿಸುತ್ತಿರುವ  ಸಚಿನೆ ಸ್ಮೃತಿ ಇರಾನಿಯವರ ರಾಜೀನಾಮೆಗೆ ಆಗ್ರಹಿಸಿ ಇಂದು ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ರಾಜಧಾನಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಿದೆ.
 


ಜಂತರ್ ಮಂತರ್‌ನಿಂದ ಸಂಸತ್ತಿನವರೆಗೂ ಪ್ರತಿಭಟನಾ ಮೆರವಣಿಗೆ ಸಾಗಲಿದೆ. 
 
ಲಲಿತ್ ಮೋದಿ ವೀಸಾ ಪಡೆಯಲು ನೆರವು ನೀಡಿದ್ದಾರೆ ಎಂದು ಸುಷ್ಮಾ ಕುರಿತು ಆರೋಪಗಳು ಕೇಳಿ ಬಂದಾಗ ಬಿಜೆಪಿ ಇಕ್ಕಟ್ಟಲ್ಲಿ ಸಿಲುಕಿತ್ತು. ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ ತಾವು ಲಂಡನ್‌ನಲ್ಲಿ ನೆಲೆಯೂರಲು ಸಲ್ಲಿಸಿದ್ದ ಮನವಿ ಪತ್ರಕ್ಕೆ  ರಹಸ್ಯವಾಗಿ ಸಹಿ ಹಾಕಿದ್ದಾರೆ ಎಂದು ಹೇಳುವ ಮೂಲಕ ಲಲಿತ್ ಮೋದಿ ಸಂಕಷ್ಟವನ್ನು ತೀವೃಗೊಳಿಸಿದ್ದರು. 
 
ಆಕೆಯ ಮೇಲಿನ ಆರೋಪವನ್ನು ಸಾಬೀತು ಪಡಿಸುವ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದ ಕಾಂಗ್ರೆಸ್  ರಾಜೇ ರಾಜಿನಾಮೆಗೆ ಪಟ್ಟು ಹಿಡಿದು ಕುಳಿತಿದೆ. 
 
ಏತನ್ಮಧ್ಯೆ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರ ವಿದ್ಯಾರ್ಹತೆ ಕುರಿತ ದೂರನ್ನು ವಿಚಾರಣೆಗೊಳಪಡಿಸಲು ದೆಹಲಿ ಕೋರ್ಟ್ ಒಪ್ಪಿಗೆ ನೀಡಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments