Webdunia - Bharat's app for daily news and videos

Install App

ನವಜೋತ್ ಸಿಂಗ್ ಸಿದ್ದು ರಾಜೀನಾಮೆ: ಆಪ್ ಪಕ್ಷದಿಂದ ಸ್ವಾಗತ

Webdunia
ಸೋಮವಾರ, 18 ಜುಲೈ 2016 (19:45 IST)
ಬಿಜೆಪಿ ರಾಜ್ಯಸಭೆ ಸದಸ್ಯ ನವಜೋತ್ ಸಿಂಗ್ ಸಿದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸಿದ ಆಮ್ ಆದ್ಮಿ ಪಕ್ಷ, ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸಿದ್ದು ಮಹತ್ವದ ಪಾತ್ರ ನಿರ್ವಹಿಸುವ ಸಾಧ್ಯತೆಗಳಿವೆ ಎಂದು ಹೇಳಿಕೆ ನೀಡಿದೆ.
 
ಸಿದ್ದು ರಾಜೀನಾಮೆ ನೀಡಿದ ಕೆಲವೇ ನಿಮಿಷಗಳಲ್ಲಿ ಆಪ್ ಪಂಜಾಬ್ ರಾಜ್ಯದ ಸಂಚಾಲಕ ಸುಚಾ ಸಿಂಗ್ ಛೋಟೆಪುರ್ ಮತ್ತು ಆಪ್ ಉಸ್ತುವಾರಿ ಹೊತ್ತಿರುವ ಸಂಜಯ್ ಸಿಂಗ್, ಇದೊಂದು ಅಪ್ರತಿಮ ಶೌರ್ಯದ ನಿರ್ಧಾರ. ಪಕ್ಷ ಅವರನ್ನು ಸ್ವಾಗತಿಸಲು ಕಾತುರವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 
ಆಪ್ ವಕ್ತಾರರಾದ ದೀಪಕ್ ಬಾಜ್‌ಪೈ ಮಾತನಾಡಿ, ಸಿದ್ದು ಶೀಘ್ರದಲ್ಲಿ ಘೋಷಣೆ ಮಾಡಲಿದ್ದಾರೆ. ಪ್ರಾಮಾಣಿಕ ರಾಜಕಾರಣ ಬಯಸುವವರಿಗೆ ಪಕ್ಷ ಸ್ವಾಗತ ಕೋರುತ್ತದೆ ಎಂದು ತಿಳಿಸಿದ್ದಾರೆ.
 
ನವಜೋತ್ ಸಿಂಗ್ ಸಿದ್ದು ಅವರನ್ನು ಸಿಎಂ ಅಭ್ಯರ್ಥಿಯಾಗಿಸಲಾಗುತ್ತದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಗೂರ್ ಲೋಕಸಭಾ ಕ್ಷೇತ್ರದ ಸಂಸದ ಭಗವಂತ್ ಮಾನ್, ಯಾರೇ ಆಗಲಿ ಆಪ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಬಯಸಿದಲ್ಲಿ ಬೇಷರತ್ತಾಗಿ ಸೇರ್ಪಡೆಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.   

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments