Webdunia - Bharat's app for daily news and videos

Install App

ದೇಗುಲಗಳಲ್ಲಿ ಪುರುಷರಿಗೆ ಮೇಲ್ವಸ್ತ್ರ ಧರಿಸುವ ನಿಯಮ ರದ್ದು: ಕೇರಳ ಸಿಎಂ ಪಿಣರಾಯಿ ಚಿಂತನೆ

Sampriya
ಗುರುವಾರ, 2 ಜನವರಿ 2025 (14:30 IST)
Photo Courtesy X
ತಿರುವನಂತಪುರ: ಕೆಲವು ದೇವಸ್ಥಾನಗಳ ಒಳಾಂಗಣ ಪ್ರವೇಶಿಸುವ ಮೊದಲು ಪುರುಷರು ತಮ್ಮ ಮೇಲ್ವಸ್ತ್ರವನ್ನು ತೆಗೆದುಹಾಕಬೇಕೆಂಬ ನಿಯಮವನ್ನು ರದ್ದು ಮಾಡಲು ಕೇರಳ ದೇವಸ್ವಂ ಮಂಡಳಿ ಯೋಜಿಸುತ್ತಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರು ಸ್ಥಾಪಿಸಿದ ಪ್ರಸಿದ್ಧ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರು ನೀಡಿದ ಹೇಳಿಕೆಯನ್ನು ಅನುಸರಿಸಿ ಮಂಡಳಿಯ ಈ ಕ್ರಮಕ್ಕೆ ಮುಂದಾಗಿದೆ ಎಂದಿದ್ದಾರೆ.

ಮಂಗಳವಾರ ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ ಸ್ವಾಮಿ ಸಚ್ಚಿದಾನಂದ, ಮೇಲ್ವಸ್ತ್ರ ತೆಗೆಯುವ ಪದ್ಧತಿಯನ್ನು ಸಾಮಾಜಿಕ ಅನಿಷ್ಟ ಎಂದು ಬಣ್ಣಿಸಿದ್ದರಲ್ಲದೆ, ಅದನ್ನು ನಿರ್ಮೂಲನೆ ಮಾಡುವಂತೆ ಕರೆ ನೀಡಿದ್ದರು.

ಸಮ್ಮೇಳನವನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು, ಸನ್ಯಾಸಿಗಳ ಕರೆಗೆ ದನಿಗೂಡಿಸಿದ್ದರು. ಅಲ್ಲದೆ ಅಂತಹ ಹೆಜ್ಜೆಯು ಸಾಮಾಜಿಕ ಸುಧಾರಣೆಯಲ್ಲಿ ಮಹತ್ವದ ನಡೆ ಎಂದು ಪರಿಗಣಿಸಬಹುದು ಎಂದಿದ್ದರು.

ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜಯನ್, ದೇವಸ್ವಂ ಮಂಡಳಿಯ ಪ್ರತಿನಿಧಿಯೊಬ್ಬರು ಇಂದು ನನ್ನನ್ನು ಭೇಟಿ ಮಾಡಿ, ಆ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಹೇಳಿದರು. ಅದು ಒಳ್ಳೆಯದು ಎಂದು ನಾನು ಹೇಳಿದೆ ಎಂದು ಹೇಳಿದ್ದಾರೆ. ಯಾವ ದೇವಸ್ವಂ ಮಂಡಳಿಯು ಈ ನಿರ್ಧಾರವನ್ನು ಜಾರಿಗೆ ತರಲಿದೆ ಎಂಬುದನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಿಲ್ಲ.

ಕೇರಳದಲ್ಲಿ ಗುರುವಾಯೂರ್, ತಿರುವಾಂಕೂರ್, ಮಲಬಾರ್, ಕೊಚ್ಚಿನ್ ಮತ್ತು ಕೂಡಲ್ಮಾಣಿಕ್ಯಂ ಸೇರಿ ಒಟ್ಟು ಐದು ದೇವಸ್ವಂ ಮಂಡಳಿಗಳು ಸುಮಾರು 3,000 ದೇವಾಲಯಗಳನ್ನು ನಿರ್ವಹಿಸುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಲ್ಮೀಕಿ ನಿಗಮದ ಹಗರಣ: ಬಳ್ಳಾರಿ ಸಂಸದ, ಶಾಸಕರ ರಾಜೀನಾಮೆಗೆ ಬಿ.ಶ್ರೀರಾಮುಲು ಆಗ್ರಹ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಮುಂದಿನ ಸುದ್ದಿ
Show comments