Webdunia - Bharat's app for daily news and videos

Install App

ಮತದಾರರ ತೀರ್ಪನ್ನು ಗೌರವಿಸಿ ಸ್ವೀಕರಿಸುತ್ತೇವೆ: ರಾಹುಲ್ ಗಾಂಧಿ

Webdunia
ಗುರುವಾರ, 19 ಮೇ 2016 (14:33 IST)
ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಗೌರವಿಸಿ ಸ್ವೀಕರಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತದಾರರ ವಿಶ್ವಾಸಗಳಿಸಲು ಪ್ರಯತ್ನಿಸುವುದಾಗಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
15 ವರ್ಷಗಳಿಂದ ಅಧಿಕಾರದಲ್ಲಿದ್ದ ಆಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನಿಂದ ಪಾಠ ಕಲಿಯುತ್ತೇವೆ ಎಂದು ತಿಳಿಸಿದ್ದಾರೆ.  
 
ಜನತೆ ನೀಡಿದ ತೀರ್ಪು ಸ್ವೀಕರಿಸುವುದಲ್ಲದೇ ಚುನಾವಣೆಯಲ್ಲಿ ಜಯಗಳಿಸಿದ ರಾಜಕೀಯ ಪಕ್ಷಗಳನ್ನು ಅಭಿನಂಧಿಸುವುದಾಗಿ ರಾಹುಲ್ ಟ್ವೀಟ್ ಮಾಡಿದ್ದಾರೆ.
 
ಚುನಾವಣೆಯಲ್ಲಿ ಹಗಲಿರಳು ಶ್ರಮಿಸಿದ ಪ್ರತಿಯೊಬ್ಬ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಿಗೆ, ಮುಖಂಡರಿಗೆ ಮತ್ತು ಮೈತ್ರಿಕೂಟದ ಪಕ್ಷಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಿರುವುದಾಗಿ ಹೇಳಿದ್ದಾರೆ. 
 
ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವುದಾಗಿ ಬಿಜೆಪಿ ನೀಡಿರುವ ಭರವಸೆಯಿಂದ ಮತದಾರರು ಬಿಜೆಪಿಯತ್ತ ವಾಲಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.
 
ಸೋಲಾರ್ ಹಗರಣ, ಭ್ರಷ್ಟಾಚಾರ ಆರೋಪಗಳಿಂದಾಗಿ ನಿರ್ಗಮಿಸುತ್ತಿರುವ ಮುಖ್ಯಮಂತ್ರಿ ಓಮನ್ ಚಾಂಡಿ, ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಜಯಗಳಿಸಿಕೊಡುವಲ್ಲಿ ವಿಫಲವಾಗಿದ್ದಾರೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತರ ಬಗ್ಗೆ ಮಾತಿನ ಕಾಳಜಿ ಇದ್ದರೆ ಸಾಲದು: ಛಲವಾದಿ ನಾರಾಯಣಸ್ವಾಮಿ

ಜೇವರ್ಗಿ , ಆಸ್ಪತ್ರೆಯ ದಾಖಲಾತಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ

ಎಐಸಿಸಿ ಹಿಂದುಳಿದ ವರ್ಗಗಳ ಸಭೆಯಲ್ಲಿ ಕೈಗೊಂಡ ನಿರ್ಣಯದ ಮಾಹಿತಿ ನೀಡಿದ ಸಿಎಂ

ಬಂಧನ ಭೀತಿಯಲ್ಲಿ ಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ನೋಡೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments