Webdunia - Bharat's app for daily news and videos

Install App

ಪಕ್ಷದ ಸೋಲಿಗೆ ಹೊಣೆ ಹೊತ್ತು ರಾಜೀನಾಮೆ: ರಾಹುಲ್ ಗಾಂಧಿ

Webdunia
ಬುಧವಾರ, 3 ಜುಲೈ 2019 (17:17 IST)
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಹಿಂಪಡೆಯುವ ಉಹಾಪೋಗಳನ್ನು ತಳ್ಳಿಹಾಕಿದ ರಾಹುಲ್ ಗಾಂಧಿ, ಪಕ್ಷದ ಸೋಲಿಗೆ ಹೊಣೆಗಾರಿಕೆ ಹೊರುವುದು ಅನಿವಾರ್ಯವಾಗಿದೆ. ಆದ್ದರಿಂದ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. 
ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಅವರ ನಿವಾಸದ ಮುಂದೆ ಪ್ರತಿಭಟನೆ ಆರಂಭಿಸಿದ್ದರು. ಇದೀಗ ರಾಜೀನಾಮೆ ಬೆಳವಣಿಗೆಗಳಿಗೆ ತೆರೆ ಬಿದ್ದಂತಾಗಿದೆ.
 
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಅನುಭವಿಸಿದ ನಷ್ಟಕ್ಕೆ ಜನರು ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು.ನಾನು ಸೋಲಿನ ಜವಾಬ್ದಾರಿಯನ್ನು ಅವರು ತೆಗೆದುಕೊಳ್ಳದಿದ್ದರೆ ಅದು ತಪ್ಪಾಗುತ್ತದೆ. ಪಕ್ಷವನ್ನು ಪುನರ್ನಿರ್ಮಿಸಲು ಕಠಿಣ ನಿರ್ಧಾರಗಳು ಬೇಕಾಗುತ್ತವೆ ಮತ್ತು 2019 ರ ವೈಫಲ್ಯಕ್ಕೆ ಹಲವಾರು ಮುಖಂಡರನ್ನು ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ.ಪಕ್ಷದ ಅಧ್ಯಕ್ಷನಾಗಿ ನಾನು ಹೊಣೆಗಾರಿಕೆ ವಹಿಸಿಕೊಳ್ಳದಿದ್ದರೆ ಬೇರೆಯವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಅನ್ಯಾಯವಾಗುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
 
ಲೋಕಸಭೆ ಚುನಾವಣೆ ನಡೆಸಿದ ರೀತಿಯ ಬಗ್ಗೆ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ಮುಕ್ತ ಮತ್ತು ನ್ಯಾಯಯುತ ಚುನಾವಣೆಗೆ ದೇಶದ ಸಂಸ್ಥೆಗಳ ತಟಸ್ಥತೆಯ ಅಗತ್ಯವಿರುತ್ತದೆ. ಮುಕ್ತ ಪತ್ರಿಕೆ ವ್ಯವಸ್ಥೆ, ಸ್ವತಂತ್ರ ನ್ಯಾಯಾಂಗ ಮತ್ತು ಪಾರದರ್ಶಕ ಚುನಾವಣಾ ಆಯೋಗವು ವಸ್ತುನಿಷ್ಠ ಮತ್ತು ತಟಸ್ಥವಾಗಿದ್ದಲ್ಲಿ ಪಾರದರ್ಶಕ ಚುನಾವಣೆ ನಡೆಸಲು ಸಾಧ್ಯವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

2019 ರ ಚುನಾವಣೆಯಲ್ಲಿ ನಾವು ರಾಜಕೀಯ ಪಕ್ಷದ ವಿರುದ್ಧ ಹೋರಾಡಲಿಲ್ಲ. ಬದಲಿಗೆ, ನಾವು ದೇಶದ ಸಂಸ್ಥೆಗಳ ವಿರುದ್ಧ ಹೋರಾಟ ಮಾಡಬೇಕಾಯಿತು, ಅದರಲ್ಲಿ ಪ್ರತಿಯೊಂದು ಸಂಸ್ಥೆಯು ಪ್ರತಿಪಕ್ಷಗಳ ವಿರುದ್ಧ ಅಕ್ರಮವೆಸಗಲು ಸಿದ್ದವಾಗಿತ್ತು. ದೇಶದಲ್ಲಿ ಪಾರದರ್ಶಕವಾಗಿ ಕಾರ್ಯನಿರ್ವಹಿಸುವ ಸಂಸ್ಥೆಗಳಿಲ್ಲ ಎನ್ನುವುದು ಇದೀಗ ಸಾಬೀತಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments