Publish Date: Fri, 12 Aug 2022 (09:31 IST)
Updated Date: Fri, 12 Aug 2022 (09:37 IST)
ನವದೆಹಲಿ : ಶಂಕೆ ಆಧಾರದಲ್ಲಿ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಲಾಗುವುದು ಎಂದು ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯನ್ನು ಖುಲಾಸೆಗೊಳಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ.
ಶಂಕೆ ಎಷ್ಟೇ ಬಲವಾಗಿರಬಹುದು, ಅದು ಸಮಂಜಸವಾದ ಸಂದೇಹವನ್ನು ಮೀರಿ ಪುರಾವೆಯ ಸ್ಥಾನವನ್ನು ತುಂಬಲು ಸಾಧ್ಯವಿಲ್ಲ ಎಂಬುದು ಕಾನೂನು. ಶಂಕೆ ಎಷ್ಟೇ ಬಲವಾಗಿದ್ದರೂ, ಅದರ ಆಧಾರದ ಮೇಲೆ ಆರೋಪಿಗೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಪೀಠ ಒತ್ತಿ ಹೇಳಿದೆ.
ಸೆಕ್ಷನ್ 302 ಮತ್ತು ಸೆಕ್ಷನ್ 201 ಅಪರಾಧಗಳಿಗೆ ಪಂಜಾಬ್ ಮತ್ತು ಹರಿಯಾಣದ ಉಚ್ಚ ನ್ಯಾಯಾಲಯವು ಶಿಕ್ಷೆ ವಿಧಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.