ಆರೋಪಿಗಳ ಎನ್ಕೌಂಟರ್ ಉದ್ದೇಶಪೂರ್ವಕ : ಸುಪ್ರೀಂ

Webdunia
ಶುಕ್ರವಾರ, 20 ಮೇ 2022 (14:29 IST)
ನವದೆಹಲಿ : ಹೈದರಾಬಾದ್ನ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ದೇಹವನ್ನು ಸುಟ್ಟು ಹಾಕಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಉದ್ದೇಶ ಪೂರ್ವಕವಾಗಿ ಎನ್ಕೌಂಟರ್ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ನೇಮಿಸಿದ ಆಯೋಗ ತಿಳಿಸಿದೆ.

ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸುಪ್ರೀಂ ನ್ಯಾ. ವಿ.ಎಸ್.ಸಿರ್ಪುಕರ್, ಬಾಂಬೆ ಹೈಕೋರ್ಟ್ನ ನಿವೃತ್ತ ನ್ಯಾ. ರೇಖಾ ಬಲ್ಡೋಟಾ ಮತ್ತು ಸಿಬಿಐನ ಮಾಜಿ ನಿರ್ದೇಶಕ ಡಾ. ಕಾರ್ತಿಕೇಯನ್ ಅವರಿದ್ದ ಆಯೋಗ ತನ್ನ ವರದಿಯನ್ನು ಸುಪ್ರೀಂಗೆ ಸಲ್ಲಿಸಿದೆ.

ಉದ್ದೇಶ ಪೂರ್ವಕವಾಗಿ ಪೊಲೀಸರು ಆರೋಪಿಗಳನ್ನು ಎನ್ಕೌಂಟರ್ ಮೂಲಕ ಹತ್ಯೆಗೈದಿದ್ದಾರೆ. ನಾಲ್ವರಲ್ಲಿ ಮೂವರು ಅಪ್ರಾಪ್ತರು. ಸಂಬಂಧಿತ ಸಮಯದಲ್ಲಿ ಜೊಲ್ಲು ಶಿವ, ಜೊಲ್ಲು ನವೀನ್ ಮತ್ತು ಚಿಂತಕುಂಟಾ ಚೆನ್ನಕೇಶವುಲು ಅವರು ಅಪ್ರಾಪ್ತರಾಗಿದ್ದರು. ಈ ಹಿನ್ನೆಲೆಯಲ್ಲಿ 10 ಪೊಲೀಸ್ ಅಧಿಕಾರಿಗಳನ್ನು ಕೊಲೆ ಆರೋಪದ ಅಡಿ ವಿಚಾರಣೆಗೆ ಒಳಪಡಿಸಬೇಕು ಎಂದು ತಿಳಿಸಿದೆ. 

ಮೃತರು 2019 ಡಿಸೆಂಬರ್ 6ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳುವುದು, ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವುದು, ಪೊಲೀಸರ ಮೇಲೆ ಹಲ್ಲೆ ಮತ್ತು ಗುಂಡು ಹಾರಿಸುವುದು ಮುಂತಾದ ಯಾವುದೇ ಅಪರಾಧವನ್ನು ಮಾಡಿಲ್ಲ ಎಂದು ನಾವು ತೀರ್ಮಾನಿಸುತ್ತೇವೆ ಎಂದು ಆಯೋಗ ವರದಿಯಲ್ಲಿ ಉಲ್ಲೇಖಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಎಕ್ಸ್ ಪ್ರೆಸ್ ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ: ಎದೆ ಝಲ್ಲೆನಿಸುವ ವಿಡಿಯೋ

ಯಾರು ಏನೇ ಹೇಳಿದ್ರೂ ಇದೊಂದು ಕಾರಣಕ್ಕೆ ರಾಷ್ಟ್ರ ರಾಜಕಾರಣ ಬೇಡ ಅಂತಾರೆ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments