Webdunia - Bharat's app for daily news and videos

Install App

ಕಾಲೇಜು ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರವೆಸಗಿದ ಆರೋಪಿ ಅರೆಸ್ಟ್

Webdunia
ಸೋಮವಾರ, 4 ಡಿಸೆಂಬರ್ 2023 (11:11 IST)
ಕ್ಯಾಂಟಿನ್‌ಗೆ ಆಗಮಿಸಿದ್ದ ವಿದ್ಯಾರ್ಥಿನಿಗೆ ಜ್ಯುಸ್‌ನಲ್ಲಿ ಮತ್ತುಬರಿಸುವ ಔಷಧಿ ಕುಡಿಸಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಒತ್ತೆಯಾಳಾಗಿ ಇರಿಸಿಕೊಂಡು ನಿರಂತರ ಅತ್ಯಾಚಾರಗೈದಿದ್ದಾನೆ.. ಆರೋಪಿ ಮಲಗಿದ್ದಾಗ ವಿದ್ಯಾರ್ಥಿನಿ ಅಲ್ಲಿಂದ ಪಾರಾಗಿ ಮನೆಗೆ ತೆರಳಿ ಘಟನೆಯನ್ನು ವಿವರಿಸಿದ್ದಾಳೆ. ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
 
ಪಾಲಿಟೆಕ್ನಿಕ್ ಕಾಲೇಜಿನ ಕ್ಯಾಂಟಿನ್‌ನ ಮಾಲೀಕನೊಬ್ಬ ಕಾಲೇಜಿನಲ್ಲಿ ಓದುತ್ತಿರುವ 20 ವರ್ಷ ವಯಸ್ಸಿನ ವಿದ್ಯಾರ್ಥಿನಿಯನ್ನು ಸುಮಾರು ತಿಂಗಳುಗಳ ಕಾಲ ಒತ್ತಾಯಳಾಗಿ ಇರಿಸಿಕೊಂಡು ಪ್ರತಿನಿತ್ಯ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ವರದಿಯಾಗಿದೆ.
 
ಆರೋಪಿಯ ಹಿಡಿತದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ ವಿದ್ಯಾರ್ಥಿನಿ ಪೊಲೀಸ್ ಠಾಣೆಗೆ ದೂರು ನೀಡಿದ ಒಂದು ದಿನದ ನಂತರ, 33 ವರ್ಷ ವಯಸ್ಸಿನ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
 
ಕಳೆದ ಏಪ್ರಿಲ್ 2012ರಲ್ಲಿ ಆರೋಪಿ ಸಿಂಗ್ ವಿದ್ಯಾರ್ಥಿನಿಯನ್ನು ನಗರದ ಹಳೆಭಾಗವಾದ ರಿಯಾಸತ್ ನಗರದಲ್ಲಿರುವ ಮನೆಯೊಂದರಲ್ಲಿ ಒತ್ತೆಯಾಳಾಗಿ ಇರಿಸಿಕೊಂಡಿದ್ದನು.. ಪೊಲೀಸರಿಗೆ ಮಾಹಿತಿ ದೊರೆಯಬಾರದು ಎನ್ನುವ ಉದ್ದೇಶದಿಂದ ನಗರದ ಇತರ ಹೊರಭಾಗಗಳಲ್ಲಿರುವ ಪ್ರದೇಶಗಳಲ್ಲಿ ಮನೆ ಬಾಡಿಗೆ ಪಡೆದು ವಾಸಸ್ಥಳವನ್ನು ಬದಲಾಯಿಸುತ್ತಿದ್ದನು. ಒಂದು ಬಾರಿ ಗರ್ಭಪಾತವನ್ನು ಕೂಡಾ ಮಾಡಿಸಿದ್ದನು ಎಂದು ಅತ್ಯಾಚಾರಕ್ಕೊಳಗಾದ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
 
ಆರೋಪಿ ಸಿಂಗ್ ವಿರುದ್ಧ ಅಪಹರಣ, ಅತ್ಯಾಚಾರ, ಲೈಂಗಿಕ ಕಿರುಕುಳ ಸೇರಿದಂತೆ ಇತರ ಪ್ರಕರಣಗಳನ್ನು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ