Webdunia - Bharat's app for daily news and videos

Install App

ವಿವಾಹವಾಗುವ ನೆಪದಲ್ಲಿ ಹಲವಾರು ಬಾರಿ ಅತ್ಯಾಚಾರವೆಸಗಿದ ಆರೋಪಿ ಅರೆಸ್ಟ್

Webdunia
ಬುಧವಾರ, 8 ನವೆಂಬರ್ 2023 (14:07 IST)
ತಂಪು ಪಾನೀಯದಲ್ಲಿ ಮತ್ತು ಬರಿಸುವು ಔಷಧಿ ನೀಡಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ. ಪ್ರಜ್ಞೆ ಮರಳಿದಾಗ ತಾನು ಅತ್ಯಾಚಾರಕ್ಕೊಳಗಾಗಿರುವುದು ತಿಳಿದು ಆರೋಪಿಯ ಮೇಲೆ ಯುವತಿ ಪೊಲೀಸ್ ಕೇಸ್ ದಾಖಲಿಸಿದ್ದರಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ವಿನೋದ್ ಕುಮಾರ್ ಯುವತಿಗೆ ಕಡಿಮೆ ಬಾಡಿಗೆ ದರದಲ್ಲಿ ಮನೆಯನ್ನು ನೀಡಿದ್ದರಿಂದ ಅಲ್ಲಿಯೇ ವಾಸಿಸುತ್ತಿದ್ದಳು. ಒಂದು ದಿನ  ಯುವತಿ ಬೆದರಿಸಿದ್ದರಿಂದ ಶೀಘ್ರದಲ್ಲಿಯೇ ಆಕೆಯನ್ನು ವಿವಾಹವಾಗುವುದಾಗಿ ನಂಬಿಸಿದ. ವಿವಾಹವಾಗುವ ನೆಪದಲ್ಲಿ ಹಲವಾರು ಬಾರಿ ಅತ್ಯಾಚಾರವೆಸಗಿದ ಎಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾಳೆ.  
 
ಮನೆಯ ಮಾಲೀಕನೊಬ್ಬ ತನ್ನ ಮನೆಯಲ್ಲಿ ಬಾಡಿಗೆಗಿದ್ದ ಮಹಿಳೆಯ ಮೇಲೆ ಸತತ ಮೂರು ವರ್ಷಗಳ ಕಾಲ ಅತ್ಯಾಚಾರವೆಸಗಿದ್ದಲ್ಲದೇ ವೇಶ್ಯಾವಾಟಿಕೆಗೆ ತಳ್ಳಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 
 
ದಕ್ಷಿಣ ದೆಹಲಿಯ ವಸಂತ್ ವಿಹಾರ್ ಪ್ರದೇಶದಲ್ಲಿ ವಾಸಿಸುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ವಿನೋದ್ ಕುಮಾರ್ ವಿರುದ್ಧ ಯುವತಿ ದೂರು ದಾಖಲಿಸಿದ ಕೂಡಲೇ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.  
 
ಉತ್ತರಪ್ರದೇಶದ ಮಥುರಾ ಜಿಲ್ಲೆಯ ಮೂಲದವಳಾದ ಯುವತಿ ನಾಲ್ಕು ವರ್ಷಗಳ ಹಿಂದೆ ಉದ್ಯೋಗವನ್ನು ಅರಿಸಿ ದೆಹಲಿಗೆ ಬಂದಿದ್ದಳು. ಆಕೆಯ ಗೆಳತಿಯೊಬ್ಬಳು ರಿಯಲ್ ಎಸ್ಟೇಟ್ ಉದ್ಯಮಿ ವಿನೋದ್ ಕುಮಾರ್‌ನನ್ನು ಯುವತಿಗೆ ಪರಿಚಯಿಸಿದ್ದಳು
 
ಏತನ್ಮಧ್ಯೆ, ಆರೋಪಿ ವಿನೋದ್ ಕುಮಾರ್ ಯುವತಿಗೆ ನಗ್ನಾವಸ್ಥೆಯಲ್ಲಿರುವ ಮತ್ತು ಆಕೆಯ ಮೇಲೆ ಹಲ್ಲೆ ಮಾಡುತ್ತಿರುವ ಎರಡು ಎಂಎಂಎಸ್‌ಗಳನ್ನು ಕಳುಹಿಸಿ ಇಂಟರ್‌ನೆಟ್‌ನಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿದ. ಕಳೆದ ವರ್ಷ ವೇಶ್ಯಾವಾಟಿಕೆಗೆ ತಳ್ಳಿದ್ದಲ್ಲದೇ ಬಂದ ಹಣವನ್ನು ಲಪಟಾಯಿಸಿದ ಎಂದು ಯುವತಿ ಆರೋಪಿಸಿದ್ದಾಳೆ.
 
ಕೊನೆಗೂ ಒಂದು ದಿನ ಯುವತಿ ತನ್ನ ಗೆಳತಿಯನ್ನು ಸಂಪರ್ಕಿಸುವಲ್ಲಿ ಯಶಸ್ವಿಯಾದಳು. ಗ್ರಾಹಕರಂತೆ ನಟಿಸಿ ಬಂದ ಇಬ್ಬರು ಯುವಕರು ಆಕೆಯನ್ನು ಬಂಧನದಿಂದ ಮುಕ್ತಗೊಳಿಸಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರಿಂದ ಆರೋಪಿ ವಿನೋದ್ ಕುಮಾರ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಮುಂದಿನ ಸುದ್ದಿ
Show comments