Select Your Language

Notifications

webdunia
webdunia
webdunia
webdunia

ಯುವತಿಯರ ಮೇಲೆ ಆ್ಯಸಿಡ್ ಎರಚುವವರು ಅಲ್ಲಾವುದ್ದೀನ್ ಖಿಲ್ಜಿಯಂತವರು: ಉಮಾಭಾರತಿ

ಯುವತಿಯರ ಮೇಲೆ ಆ್ಯಸಿಡ್ ಎರಚುವವರು ಅಲ್ಲಾವುದ್ದೀನ್ ಖಿಲ್ಜಿಯಂತವರು: ಉಮಾಭಾರತಿ
ಜೈಪುರ್ , ಶನಿವಾರ, 4 ನವೆಂಬರ್ 2017 (16:41 IST)
ಯುವತಿಯರ ಮೇಲೆ ಆ್ಯಸಿಡ್ ಎರಚುವವರು ಅಲ್ಲಾವುದ್ದೀನ್ ಖಿಲ್ಜಿ ವಂಶಸ್ಥರು ಎಂದು ಕೇಂದ್ರ ಸಚಿವೆ ಉಮಾಭಾರತಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವುದೇ ಕಾರಣಕ್ಕೂ ರಾಣಿ ಪದ್ಮಾವತಿ ಇತಿಹಾಸ ತಿರುಚಲು ಬಿಡುವುದಿಲ್ಲ. ಪದ್ಮಾವತಿ ಚಿತ್ರದಲ್ಲಿ ಇತಿಹಾಸಕ್ಕೆ ಕಳಂಕ ತರುವ ದೃಶ್ಯಗಳಿವೆ ಎನ್ನುವ ಶಂಕೆ ಕಾಡುತ್ತಿದೆ ಎಂದು ತಿಳಿಸಿದ್ದಾರೆ.
 
ರಾಜಸ್ಥಾನದಾದ್ಯಂತ ಬಾಲಿವುಡ್‌ನ ಪದ್ಮಾವತಿ ಚಿತ್ರವನ್ನು ವಿರೋಧಿಸಿ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಸಚಿವೆ ಉಮಾಭಾರತಿ ಎಂಟ್ರಿ ಕೊಟ್ಟಿರುವುದು ಪ್ರತಿಭಟನೆಕಾರರಿಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಮೂಲಗಳು ತಿಳಿಸಿವೆ.
 
 ವಿವಾದಿತ ಪದ್ಮಾವತಿ ಸಿನೆಮಾ ಸಂಬಂಧ ಚಿತ್ರದ ನಿರ್ದೇಶಕರಿಗೆ ಬಹಿರಂಗ ಪತ್ರ ಬರೆದಿರುವ ಸಚಿವೆ ಉಮಾಭಾರತಿ, ರಾಣಿ ಪದ್ಮಾವತಿ, ರಾಣಿ ಪದ್ಮಾವತಿ ಇತಿಹಾಸಕ್ಕೆ ಯಾವುದೇ ಕಾರಣಕ್ಕೂ ಧಕ್ಕೆಯಾಗಬಾರದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಫ್ಐ ಮಾತ್ರವಲ್ಲ ಆರೆಸ್ಸೆಸ್ ಸಹ ಬ್ಯಾನ್ ಆಗಬೇಕು: ದಿನೇಶ್ ಗುಂಡೂರಾವ್