Webdunia - Bharat's app for daily news and videos

Install App

ದೇಶದಲ್ಲಿ 150 ದಿನಗಳ ಕನಿಷ್ಠ ಮಟ್ಟಕ್ಕೆ ಸಕ್ರಿಯ ಕೋವಿಡ್ ಪ್ರಕರಣ

Webdunia
ಸೋಮವಾರ, 23 ಆಗಸ್ಟ್ 2021 (09:37 IST)
ಹೊಸದಿಲ್ಲಿ, ಆ.23: ಐದು ತಿಂಗಳಲ್ಲಿ ಮೊದಲ ಬಾರಿಗೆ ದೇಶದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 3.5 ಲಕ್ಷದ ಮಟ್ಟಕ್ಕಿಂತ ಕೆಳಗಿಳಿದಿದೆ. ದೇಶದಲ್ಲಿ ಶೇಕಡ 50ರಷ್ಟು ವಯಸ್ಕರಿಗೆ ಲಸಿಕೆ ನೀಡಿದ ಮೈಲುಗಲ್ಲನ್ನು ತಲುಪಲು ಸಜ್ಜಾಗಿರುವ ನಡುವೆಯೇ ದೇಶದಲ್ಲಿ ಸಾಂಕ್ರಾಮಿಕದ ಹರಡುವಿಕೆ ಕಡಿಮೆಯಾಗಿರುವುದು ಸರ್ಕಾರಿ ಅಂಕಿ ಅಂಶಗಳಿಂದ ತಿಳಿದುಬರುತ್ತದೆ.

ಕರಾಳ ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ರವಿವಾರ 3,41,189ಕ್ಕೆ ಇಳಿದಿದೆ. ಇದು 2021ರ ಮಾರ್ಚ್ 20ರ ಬಳಿಕ ದಾಖಲಾದ ಕನಿಷ್ಠ ಸಂಖ್ಯೆಯಾಗಿದೆ. ಇದಕ್ಕೆ ತದ್ವಿರುದ್ಧವಾಗಿ ದೇಶದಲ್ಲಿ 37.5 ಲಕ್ಷ ಸಕ್ರಿಯ ಪ್ರಕರಣಗಳು ಮೇ 9ರಂದು ದಾಖಲಾಗಿದ್ದವು. ಅಂದರೆ ಎರಡನೇ ಅಲೆಯ ಉತ್ತುಂಗದ ಮಟ್ಟಕ್ಕೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡ 90ರಷ್ಟು ಇಳಿಕೆ ಕಂಡುಬಂದಿದೆ.
ಈ ನಡುವೆ ಭಾರತ ಶೇಕಡ 50ರಷ್ಟು ವಯಸ್ಕ ಜನಸಂಖ್ಯೆಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡಿದ ಹಂತ ತಲುಪಲು ಸಜ್ಜಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಇದುವರೆಗೆ 58.15 ಡೋಸ್ಗಳನ್ನು ನೀಡಲಾಗಿದ್ದು, ಒಟ್ಟು 45.07 ಕೋಟಿ ಮಂದಿ ಲಸಿಕೆ ಪಡೆದಿದ್ದಾರೆ. 32 ಕೋಟಿ ಮಂದಿಗೆ ಒಂದು ಡೋಸ್ ನೀಡಲಾಗಿದ್ದರೆ, 13.07 ಕೋಟಿ ಮಂದಿಗೆ ಎರಡೂ ಡೋಸ್ಗಳು ಪೂರ್ಣಗೊಂಡಿವೆ.
2021ರ ಒಟ್ಟು ಜನಸಂಖ್ಯೆ ಅಂದಾಜಿನ ಪ್ರಕಾರ ದೇಶದಲ್ಲಿ 94 ಕೋಟಿ ಮಂದಿ ವಯಸ್ಕರು ಇದ್ದಾರೆ. ಇದುವರೆಗೆ ಈ ಪೈಕಿ ಶೇಕಡ 48ರಷ್ಟು ಮಂದಿಗೆ (ಶೇಕಡ 34 ಮಂದಿಗೆ ಒಂದು ಡೋಸ್, ಶೇಕಡ 18 ಮಂದಿಗೆ ಎರಡು ಡೋಸ್) ಲಸಿಕೆ ನೀಡಲಾಗಿದೆ. ರವಿವಾರ ದೇಶದಲ್ಲಿ 25,426 ಹೊಸ ಪ್ರಕರಣಗಳು ವರದಿಯಾಗಿದ್ದು, 385 ಮಂದಿ ಸಾವನ್ನಪ್ಪಿದ್ದಾರೆ. ಏಳು ದಿನಗಳ ಸರಾಸರಿ 156 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಅಂದರೆ 31,965ಕ್ಕೆ ಇಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

ಮುಂದಿನ ಸುದ್ದಿ
Show comments