Webdunia - Bharat's app for daily news and videos

Install App

ಮಾತೃಭೂಮಿಯ ಬೆನ್ನಿಗೆ ಚೂರಿ ಹಾಕಿದ ಉಗ್ರ ಆದಿಲ್ ಅಹಮ್ಮದ್ ಧರ್

Webdunia
ಶುಕ್ರವಾರ, 15 ಫೆಬ್ರವರಿ 2019 (10:48 IST)
ಪುಲ್ವಾಮ : ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸಿ.ಆರ್‍.ಪಿ.ಎಫ್ ಯೋಧರ ವಾಹನದ ಮೇಲೆ ದಾಳಿ ಮಾಡಿದ್ದ ಉಗ್ರ ಆದಿಲ್ ಅಹಮ್ಮದ್ ಧರ್ ಒಬ್ಬ ಭಾರತೀಯ ಎಂಬ ಶಾಕಿಂಗ್ ಮಾಹಿತಿವೊಂದು ತಿಳಿದುಬಂದಿದೆ.


ಕಾಶ್ಮೀರದ ಪುಲ್ವಾಮ ದಾಳಿ ಮಾಡಿದ ಜೈಶ್-ಇ-ಮೊಹಮದ್ ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹರಿಬಿಟ್ಟಿದ್ದು, ಇದರಲ್ಲಿ ಸಂಘಟನೆಯ ಧ್ವಜದ ಮುಂದೆ ಶಸ್ತ್ರಸಜ್ಜಿತನಾಗಿ ನಿಂತು ತಾನು ಮಾಡಲು ಹೊರಟ ಕೃತ್ಯದ ಬಗ್ಗೆ ಮಾತನಾಡಿದ ಆದಿಲ್ ದಾರ್, ತನ್ನ ಬೆಂಬಲಿಸುವಂತೆ ಕಾಶ್ಮೀರಿ ಮುಸ್ಲಿಮರಲ್ಲಿಯೂ ಆತ ಮನವಿ ಮಾಡಿಕೊಂಡಿದ್ದು, ಈ ವಿಡಿಯೋ ಬಿಡುಗಡೆ ಆಗುವ ವೇಳೆ ನಾನು ಸ್ವರ್ಗದಲ್ಲಿರುತ್ತೇನೆ ಎಂದು ಹೇಳಿದ್ದಾನೆ.


ಈತ ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಕಾಕ್ಪೊರಾ ನಿವಾಸಿಯಾಗಿದ್ದು, ಜೈಶ್ ಎ ಮೊಹ್ಮದ್ ಸಂಘಟನೆಯಿಂದ ಪ್ರೇರೇಪಣೆಗೊಂಡು ಕಳೆದ ವರ್ಷ ಉಗ್ರ ಸಂಘಟನೆ ಸೇರಿ ಆತ್ಮಾಹುತಿ ದಾಳಿಯ ಬಗ್ಗೆ ಪಾಕ್‍ನ ಅಬ್ದುಲ್ ರಶೀದ್ ಘಾಜಿ ಎಂಬಾತನಿಂದ  ಟ್ರೈನಿಂಗ್ ಪಡೆದ್ದನು. ಆದರೆ ಇದೀಗ ಸಿ.ಆರ್‍.ಪಿ.ಎಫ್ ಯೋಧರ ವಾಹನದ ಮೇಲೆ ದಾಳಿ ಮಾಡಿ 44 ಯೋಧರನ್ನು ಬಲಿ ಪಡೆದು ಮಾತೃಭೂಮಿಯ ಬೆನ್ನಿಗೆ ಚೂರಿ ಹಾಕಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments