Webdunia - Bharat's app for daily news and videos

Install App

ಪಾಕ್ ಗಾಯಕನಿಗೆ ಬಹಿಷ್ಕಾರ: ಸಮರ್ಥಿಸಿಕೊಂಡ ಶಿವಸೇನೆ

Webdunia
ಗುರುವಾರ, 8 ಅಕ್ಟೋಬರ್ 2015 (17:32 IST)
ಪಾಕ್‌ನ ಖ್ಯಾತ ಗಜಲ್ ಮಾಂತ್ರಿಕ ಗುಲಾಂ ಅಲಿ ಅವರ ಸಂಗೀತ ಕಛೇರಿ ರದ್ದುಗೊಳ್ಳಲು ಕಾರಣವಾದ ಶಿವಸೇನೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಮಧ್ಯೆ ಶಿವಸೇನೆಯ ನಿರ್ಣಯವನ್ನು ಯುವಸೇನಾ ಅಧ್ಯಕ್ಷ ಆದಿತ್ಯ ಠಾಕ್ರೆ ಸಮರ್ಥಿಸಿಕೊಂಡಿದ್ದು, ಭಯೋತ್ಪಾದನೆ ಮತ್ತು ಸಾಂಸ್ಕೃತಿಕ ಸಂಬಂಧ ಜತೆಗೆ ಸಾಗಲು ಸಾಧ್ಯವಿಲ್ಲ ಎಂದಿದ್ದಾರೆ. 

"ಕಾಶ್ಮೀರದ ಗಡಿಯಲ್ಲಿ ನಮ್ಮ ಸೈನಿಕರು ಹುತಾತ್ಮರಾಗುತ್ತಿರುವಾಗ ನಾವು ಇಲ್ಲಿ ಕುಳಿತು ಸಂಗೀತವನ್ನು ಆಹ್ಲಾದಿಸಲು ಸಾಧ್ಯವಿಲ್ಲ. ಪಾಕಿಸ್ತಾನದೊಂದಿಗೆ ಯಾವುದೇ ಸಂಬಂಧ ಹೊಂದುವುದು ದೇಶದ್ರೋಹದ ನಡೆ. ಕೆಲವು ರೀತಿಯಲ್ಲಾದರೂ ಬಹಿಷ್ಕಾರ ತೋರಿಸಬೇಕು", ಎಂದು ಶಿವಸೇನೆ ಅಧ್ಯಕ್ಷ ಹಾಗೂ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಹೇಳಿದ್ದಾರೆ.
 
ನಮ್ಮ ಪಕ್ಷ ಸಂಗೀತ ಅಥವಾ ಕಲೆ ವಿರೋಧಿಯಲ್ಲ, ಆದರೆ ಗಡಿಯಲ್ಲಿ ಏರ್ಪಟ್ಟಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಸಂಗೀತ ಕಚೇರಿಯನ್ನು ವಿರೋಧಿಸಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
 
ಪಾಕಿಸ್ತಾನಿ ಸಂಗೀತಗಾರ, ಗಝಲ್ ಮಾಂತ್ರಿಕ ಉಸ್ತಾದ್ ಗುಲಾಮ್ ಆಲಿಯವರು ಇದೇ ಶುಕ್ರವಾರ ಮುಂಬೈಯ ಷಣ್ಮುಖಾನಂದ್ ಹಾಲ್‌‌‌‌ನಲ್ಲಿ ಸಂಗೀತ ಕಛೇರಿ ನಡೆಸಿ ಕೊಡುವವರಿದ್ದರು. ಶಿವ ಸೇನೆಯ ಬೆದರಿಕೆಯ ಹಿನ್ನೆಲೆಯಲ್ಲಿ  ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
 
ಗಝಲ್ ಗಾಯಕ ದಿವಂಗತ ಜಗ್ ಜೀತ್ ಸಿಂಗ್ ಸ್ಮರಣಾರ್ಥ ಗುಲಾಮ್ ಆಲಿಯವರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments