Select Your Language

Notifications

webdunia
webdunia
webdunia
webdunia

ಆದಿತ್ಯಾ ಠಾಕ್ರೆಗೆ ಬೆದರಿಕೆ!

ಆದಿತ್ಯಾ ಠಾಕ್ರೆಗೆ ಬೆದರಿಕೆ!
ಮುಂಬೈ , ಶುಕ್ರವಾರ, 24 ಡಿಸೆಂಬರ್ 2021 (06:03 IST)
ಮುಂಬೈ : ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯಾ ಠಾಕ್ರೆಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಜೈ ಸಿಂಗ್ ರಜಪೂತ್ ಬಂಧಿತ ಆರೋಪಿ. ಡಿಸೆಂಬರ್ 18 ರಂದು ಆ ಆರೋಪಿಯನ್ನು ಬಂಧಿಸಿ ಮುಂಬೈಗೆ ಕರೆ ತಂದಿದ್ದೇವೆ ಎಂದು ಮುಂಬೈ ಅಪರಾಧ ವಿಭಾಗದ ಸೈಬರ್ ತಂಡ ತಿಳಿಸಿದೆ.

ಮಹಾರಾಷ್ಟ್ರ ಕ್ಯಾಬಿನೆಟ್ ಮಂತ್ರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಡಿಸೆಂಬರ್ 23 ರಂದು ತಿಳಿಸಿದ್ದಾರೆ.

ಆದಿತ್ಯಾ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಯವರ ಮಗನಾಗಿದ್ದು, ಆರೋಪಿಯು ಡಿಸೆಂಬರ್ 8 ರಂದು ಆದಿತ್ಯ ಠಾಕ್ರೆಗೆ ಕರೆ ಮಾಡಿದ್ದಾನೆ. ಆದರೆ ಆ ಕರೆಯನ್ನು ಅವರು ತೆಗೆದಿಲ್ಲ. ನಂತರದಲ್ಲಿ ಆರೋಪಿಯು ಸಚಿವರಿಗೆ ಬೆದರಿಕೆಯ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತರು, SC-ST ಸಮುದಾಯದವರ ಮತಾಂತರ ಮಾಡಿದ್ರೆ 3 -10 ವರ್ಷ ಜೈಲು, ದಂಡ