Webdunia - Bharat's app for daily news and videos

Install App

ಸ್ಪೀಕರ್ ಮಹಾಜನ್, ಸಚಿವ ಅನಂತಕುಮಾರ್ ಬಗ್ಗೆ ಅಡ್ವಾಣಿ ಅಸಮಧಾನ

Webdunia
ಗುರುವಾರ, 8 ಡಿಸೆಂಬರ್ 2016 (15:27 IST)
ಅಪರೂಪದ ಹಸ್ತಕ್ಷೇಪವೆಂಬಂತೆ ಬಿಜೆಪಿ ಹಿರಿಯ ಧುರೀಣ, ಲೋಕಸಭಾ ಸಂಸದ ಎಲ್.ಕೆ ಅಡ್ವಾಣಿ ಲೋಕಸಭಾ ಸಭಾಪತಿ ಸುಮಿತ್ರಾ ಮಹಾಜನ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ವಿರುದ್ಧ ಅಸಮಧಾನ ವ್ಯಕ್ತ ಪಡಿಸಿದ್ದಾರೆ.
ಇವರೀರ್ವರು ಕೆಳಮನೆಯ ಕಾರ್ಯಭಾರವನ್ನು ನಿರ್ವಹಿಸಲು ವಿಫಲರಾಗಿದ್ದಾರೆ. ಸದನವನ್ನು ಅನಿರ್ದಿಷ್ಟ ಕಾಲಕ್ಕೆ ಯಾಕೆ ಮುಂದೂಡಲಾಗುತ್ತಿಲ್ಲ ಎಂದು ಅವರು ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ.
 
ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಕೋಲಾಹಲ ಏರ್ಪಟ್ಟು ಬುಧವಾರ ಲೋಕಸಭಾ ಕಲಾಪವನ್ನು ಮುಂದೂಡಲಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಈ ಅಭಿಪ್ರಾಯವನ್ನು ಹೊರಹಾಕಿದ್ದಾರೆ. 
 
ನೀವು ( ಅನಂತ ಕುಮಾರ್) ಮತ್ತು ಸ್ಪೀಕರ್ ಕೆಳಮನೆಯನ್ನು ನಡೆಸಲು ವಿಫಲರಾಗಿದ್ದಿರಿ ಎಂದು ನೇರವಾಗಿ ಅವರು ಅನಂತ ಕುಮಾರ್ ಅವರ ಮುಂದೆಯೇ ತಮ್ಮ ಅಸಮಧಾನವನ್ನು ವ್ಯಕ್ತ ಪಡಿಸಿದ್ದಾರೆ. ಅವರ ಈ ಕೋಪದಿಂದ ವಿಚಲಿತರಾದ ಅವರ ಆಪ್ತ ಶಿಷ್ಯರೆಂದು ಗುರುತಿಸಲ್ಪಡುವ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಮಾಜಿ ಪ್ರಧಾನಿಯನ್ನು ಸಂತೈಸಲು ಪ್ರಯತ್ನಿಸುತ್ತಿದ್ದುದು ಕಂಡು ಬಂತು.
 
ಬಳಿಕ ಅಡ್ವಾಣಿ ಎಷ್ಟು ಗಂಟೆಯವರೆಗೆ ಕಲಾಪವನ್ನು ಮುಂದೂಡಲಾಗಿದೆ ಎಂದು ಲೋಕಸಭೆಯ ಅಧಿಕಾರಿಗಳಲ್ಲಿ ಪ್ರಶ್ನಿಸಿದರು. ಅವರು 2 ಗಂಟೆಯವರೆಗೆ ಎಂದುತ್ತರಿಸಿದಾಗ ಆಶ್ಚರ್ಯ ವ್ಯಕ್ತ ಪಡಿಸಿದ ಅವರು ಯಾಕೆ ಅನಿರ್ದಿಷ್ಟ ಕಾಲಕ್ಕೆ ಮುಂದೂಡಲಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments