Webdunia - Bharat's app for daily news and videos

Install App

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಅತಿಶಿ ಗುಡ್‌ಬೈ

Sampriya
ಭಾನುವಾರ, 9 ಫೆಬ್ರವರಿ 2025 (14:03 IST)
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಶಕಗಳಿಂದ ಅಧಿಕಾರದಲ್ಲಿದ್ದ ಆಮ್‌ ಆದ್ಮಿ ಪಕ್ಷ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಅಶಿತಿ ಅವರು ರಾಜ್ಯಪಾಲ ವಿ.ಕೆ ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.  ಬಿಜೆಪಿ ಬಹುಮತ ಪಡೆದಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಮುಂದುವರಿದಿದೆ. ಒಂದೆರಡು ದಿನಗಳಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಆಯ್ಕೆ ನಡೆಯಲಿದೆ.

ಈ ಬಾರಿ ಚುನಾವಣೆಯಲ್ಲಿ ಎಎಪಿ ವರಿಷ್ಠ, ಮಾಜಿ ಸಿಎಂ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿದಂತೆ ಘಟಾನುಘಟಿ ನಾಯಕರೇ ಸೋತು ಸುಣ್ಣವಾದ ಹೊರತಾಗಿಯೂ ಅತಿಶಿ ತನ್ನ ಕಲ್ಕಾಜಿ ಕ್ಷೇತ್ರವನ್ನು ಉಳಿಸಿಕೊಂಡರು. ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧೂರಿ ವಿರುದ್ಧ ತೀವ್ರ ಹಿನ್ನಡೆ ಅನುಭವಿಸಿದ್ದ ಅತಿಶಿ 8-9ನೇ ಸುತ್ತಿನ ಬಳಿಕ‌ ಸತತವಾಗಿ ಮುನ್ನಡೆ ಕಾಯ್ದುಕೊಂಡು ಗೆಲುವು ಸಾಧಿಸಿದ್ರು.

ಕಲ್ಕಾಜಿ ಕ್ಷೇತ್ರದಲ್ಲಿ ಆಪ್‌ ಅಭ್ಯರ್ಥಿ ಅತಿಶಿ 52,154 ಮತಗಳನ್ನು ಪಡೆದು 3,521 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೆ, ಬಿಧೂರಿ 48,633 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.  

ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೇರಿದೆ. ಆದ್ರೆ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್‌ ಸೋಲು ಕಂಡಿದ್ದರೆ, ʻಕೈʼ ಪಾಳಯ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments