Webdunia - Bharat's app for daily news and videos

Install App

ಸಚಿವ ಸ್ಥಾನ ಸಿಗದ ಅಣ್ಣಾಮಲೈರನ್ನು ಸೂರ್ಯವಂಶದ ಅಮಿತಾಭ್ ಬಚ್ಚನ್ ಗೆ ಹೋಲಿಸಿ ಟ್ರೋಲ್

Krishnaveni K
ಸೋಮವಾರ, 10 ಜೂನ್ 2024 (10:00 IST)
ನವದೆಹಲಿ: ತಮಿಳುನಾಡಿನಲ್ಲಿ ಬಿಜೆಪಿಗೆ ಹೊಸ ಭರವಸೆ ತಂದಿದ್ದ ಮಾಜಿ ಐಪಿಎಸ್ ಅಧಿಕಾರಿ, ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನಿನ್ನೆ ಮೋದಿ ಹೊಸ ಸರ್ಕಾರದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಎಲ್ಲರೂ ಅಂದುಕೊಂಡಿದ್ದರು.

ಆದರೆ ಅಣ್ಣಾಮಲೈಗೆ ಕೊನೆ ಕ್ಷಣದಲ್ಲಿ ಅವಕಾಶ ಮಿಸ್ ಆಯ್ತು. ತಮಿಳುನಾಡಿನಲ್ಲಿ ಅಣ್ಣಾಮಲೈ ಈ ಬಾರಿ ಚುನಾವಣೆಗೆ ನಿಂತು ಸೋಲು ಅನುಭವಿಸಿದ್ದರು. ಆದರೆ ತಮಿಳುನಾಡಿನಲ್ಲಿ ಪಕ್ಷ ಕಟ್ಟುವಲ್ಲಿ ಅವರು ತೋರಿರುವ ಶ್ರಮಕ್ಕೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆಯಲ್ಲಿ ಸ್ಥಾನ ನೀಡಿ ಸಚಿವರನ್ನಾಗಿ ಮಾಡಲಿದೆ ಎನ್ನಲಾಗಿತ್ತು.

ಆದರೆ ಅಣ್ಣಾಮಲೈಗೆ ಕೊನೆಗೂ ಸಂಪುಟದಲ್ಲಿ ಸ್ಥಾನ ಸಿಗಲೇ ಇಲ್ಲ. ಆದರೆ ಇದನ್ನೇ ಅವರ ವಿರೋಧಿಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಿಕೊಂಡು ಕಿಚಾಯಿಸಿದ್ದಾರೆ. ಅಣ್ಣಾಮಲೈ ಹೈಕಮಾಂಡ್ ಗೆ ತಮಿಳುನಾಡಿನಲ್ಲಿ ಈ ಬಾರಿ ಬಿಜೆಪಿ ಗೆಲ್ಲುತ್ತದೆ ಎಂದು ಫೂಲ್ ಮಾಡಿದಂತೆ ಅವರಿಗೂ ಬಿಜೆಪಿ ಹೈಕಮಾಂಡ್ ಫೂಲ್ ಮಾಡಿತು ಎಂದು ಕೆಲವರು ಹೇಳಿದ್ದಾರೆ.

ಮತ್ತೆ ಕೆಲವರು ಅಣ್ಣಾಮಲೈರನ್ನು ಸೂರ್ಯವಂಶ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಪಾತ್ರಕ್ಕೆ ಹೋಲಿಸಿದ್ದಾರೆ. ಸೂರ್ಯವಂಶ ಸಿನಿಮಾದಲ್ಲಿ ಮನೆ ಮಗನಾದರೂ ಅತ್ತೆ ಮಗಳ ಮದುವೆಯಲ್ಲಿ ಆಳಿನಂತೆ ದುಡಿಯುವ ಅಮಿತಾಭ್ ಬಚ್ಚನ್ ಜೊತೆ ಅಣ್ಣಾಮಲೈರನ್ನು ಹೋಲಿಕೆ ಮಾಡಿ ಲೇವಡಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಬಾಂಗ್ಲಾದೇಶ ಫೈಟರ್ ಜೆಟ್‌ ದುರಂತ: 6 ತರಗತಿ ವಿದ್ಯಾರ್ಥಿ ಸೇರಿ 16 ಮಂದಿ ಸಾವು

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಮುಂದಿನ ಸುದ್ದಿ
Show comments