Webdunia - Bharat's app for daily news and videos

Install App

ಹಿಮಾಚಲ ಪ್ರದೇಶ ಬಳಿಕ ಪಂಜಾಬ್ ಗೂ ಆರ್ಥಿಕ ಸಂಕಷ್ಟ: ಫ್ರೀ ಕೊಟ್ಟಿದ್ದರ ಫಲವೇ

Krishnaveni K
ಶುಕ್ರವಾರ, 6 ಸೆಪ್ಟಂಬರ್ 2024 (16:45 IST)
Photo Credit: Facebook
ನವದೆಹಲಿ: ಹಿಮಾಚಲಪ್ರದೇಶದ ಬಳಿಕ ಈಗ ಪಂಜಾಬ್ ನ ಆಪ್ ಸರ್ಕಾರವೂ ಕೈ ಕಾಲಿ ಮಾಡಿಕೊಂಡು ಕೂತಿದೆ. ಪಂಜಾಬ್ ನಲ್ಲೂ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು ಸರ್ಕಾರ ಪೆಟ್ರೋಲ್-ಡೀಸೆಲ್ ದರರ ಏರಿಕೆ ಮಾಡಿದೆ. ಇದೆಲ್ಲಾ ಉಚಿತ ಕೊಡುಗೆಯ ಫಲ ಎನ್ನಲಾಗುತ್ತಿದೆ.

ಸಿಎಂ ಭಗವಂತ್ ಸಿಂಗ್ ಮಾನ್ ನೇತೃತ್ವದ ಆಪ್ ಸರ್ಕಾರ ಪಂಜಾಬ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್  ಹೆಚ್ಚಳ ಮಾಡಿದೆ. ಪರಿಣಾಮ ಇದು ಜನಸಾಮಾನ್ಯರಿಗೆ ದರ ಏರಿಕೆ ಬಿಸಿ ತಟ್ಟಿದೆ. ಪೆಟ್ರೋಲ್ ಪ್ರತೀ ಲೀಟರ್ ಗೆ 61 ಪೈಸೆ, ಡೀಸೆಲ್ ಪ್ರತೀ ಲೀಟರ್ ಗೆ 92 ಪೈಸೆ ಹೆಚ್ಚಳವಾಗಿದೆ.

ಕೆಲವು ದಿನಗಳ ಹಿಂದೆ ಹಿಮಾಚಲ ಪ್ರದೇಶ ಆರ್ಥಿಕವಾಗಿ ದಿವಾಳಿಯಾಗಿರುವ ಕಾರಣ ಕೇಂದ್ರದ ಸಹಾಯ ಕೋರಿತ್ತು. ನೆರೆ ಪರಿಹಾರ ಕೊಡಲೂ ಹಣವಿಲ್ಲವೆಂದು ಕೇಂದ್ರಕ್ಕೆ ದುಂಬಾಲು ಬಿದ್ದಿತ್ತು. ಇದೀಗ ಇಂಡಿಯಾ ಒಕ್ಕೂಟದ ಮತ್ತೊಂದು ಪಕ್ಷ ಆಡಳಿತದಲ್ಲಿರುವ ಪಂಜಾಬ್ ನಲ್ಲೂ ಇದೇ ಗತಿಯಾಗಿದೆ.

ಸರ್ಕಾರಿ ನೌಕರರ ವೇತನವೂ ವಿಳಂಬವಾಗಿದೆ. ಇನ್ನು, ಆಪ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯ ಸರ್ಕಾರ ಆರ್ಥಿಕತೆ ನಿಭಾಯಿಸಲು ವಿಫಲವಾಗಿದೆ. ಎಲ್ಲವೂ ಉಚಿತ ಕೊಡುಗೆಗಳ ಫಲ ಎಂದಿದೆ. ಕೇವಲ ಎರಡೇ ವರ್ಷಗಳಲ್ಲಿ ಆಪ್ ಸರ್ಕಾರ ದಿವಾಳಿಯಾಗಿದೆ ಎಂದು ಅಕಾಲಿ ದಳವೂ ಟೀಕೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments