Webdunia - Bharat's app for daily news and videos

Install App

ಹಾಂಗ್ ಕಾಂಗ್ ಬಳಿಕ ಭಾರತದಲ್ಲೂ ಈ ಎರಡು ಮಸಾಲಾ ವಸ್ತುಗಳಿಗೆ ನಿಷೇಧ

Krishnaveni K
ಮಂಗಳವಾರ, 23 ಏಪ್ರಿಲ್ 2024 (10:00 IST)
ನವದೆಹಲಿ: ಭಾರತೀಯ ಮೂಲದ ಮಸಲಾ ವಸ್ತುಗಳ ತಯಾರಕರಾದ ಎವರೆಸ್ಟ್ ಉತ್ಪನ್ನಗಳನ್ನು ಹಾಂಗ್ ಕಾಂಗ್ ಇತ್ತೀಚೆಗೆ ಹಾನಿಕಾರಕ ಅಂಶವಿದೆ ಎಂಬ ಕಾರಣಕ್ಕೆ ನಿಷೇಧಿಸಿತ್ತು. ಇದರ ಬೆನ್ನಲ್ಲೇ ಈಗ ಭಾರತದಲ್ಲೂ ಈ ಉತ್ಪನ್ನಗಳು ನಿಷೇಧದ ಭೀತಿಯಲ್ಲಿದೆ.

ಎವರೆಸ್ಟ್ ಮಸಾಲಾದಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ಪತ್ತೆಯಾದ ಹಿನ್ನಲೆಯಲ್ಲಿ ಹಾಂಗ್ ಕಾಂಗ್ ನ ಭಾರತದ ಈ ಉತ್ಪನ್ನಕ್ಕೆ ನಿಷೇಧ ಹೇರಿತ್ತು. ಇದರ ಬೆನ್ನಲ್ಲೇ ಭಾರತವೂ ಎಚ್ಚೆತ್ತುಕೊಂಡಿದೆ. ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗ (ಎಫ್ಎಸ್ಎಸ್ಎಐ) ಎವರೆಸ್ಟ್ ಮತ್ತು ಎಂಡಿಎಚ್ ಮಸಾಲ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ಆದೇಶಿಸಿದೆ.

ಈ ಎರಡೂ ಉತ್ಪನ್ನಗಳಲ್ಲೂ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ಆರೋಪಗಳ ಹಿನ್ನಲೆಯಲ್ಲಿ ಎಫ್ಎಸ್ಎಸ್ಎಐ ಈ ಉತ್ಪನ್ನಗಳಿಗೆ ನಿಷೇಧ ಹೇರುವ ನಿಟ್ಟಿನಲ್ಲಿ ಪರೀಕ್ಷೆಗೆ ಮುಂದಾಗಿದೆ. ಹಾಂಗ್ ಕಾಂಗ್ ಆಹಾರ ಗುಣಮಟ್ಟ ವಿಭಾಗ ಎಂಡಿಎಚ್ ನ ಸಾಂಬಾರ್ ಮಸಾಲ, ಮದ್ರಾಸ್ ಕರಿ ಮಸಾಲ ಮತ್ತು ಕರಿ ಪೌಡರ್ ಹಾಗೂ ಎವರೆಸ್ಟ್ ಬ್ರ್ಯಾಂಡ್ ನ ಫಿಶ್ ಕರಿ ಮಸಾಲವನ್ನು ಪರೀಕ್ಷೆಗೆ ಒಳಪಡಿಸಿತ್ತು. ಈ ವೇಳೆ ಕ್ಯಾನ್ಸರ್ ಕಾರಕವಾದ ಕಾರ್ಸಿನೋಜೆನಿಕ್ ಪೆಸ್ಟಿಸೈಡ್ ಇಥೆಲಿನ್ ಆಕ್ಸೈಡ್ ಪತ್ತೆಯಾಗಿತ್ತು ಎಂದು ತಿಳಿದುಬಂದಿತ್ತು.

ಇದೇ ಕಾರಣಕ್ಕೆ ಈಗ ಭಾರತದ ಆಹಾರ ಗುಣಮಟ್ಟ ವಿಭಾಗವೂ ಇವುಗಳನ್ನು ಪರೀಕ್ಷೆಗೊಳಪಡಿಸಲು ತೀರ್ಮಾನಿಸಿದೆ. ಒಂದು ವೇಳೆ ಪರೀಕ್ಷೆಯಲ್ಲಿ ಹಾನಿಕಾರಕ ಅಂಶ ದೃಢಪಟ್ಟರೆ ಭಾರತದಲ್ಲೂ ಈ ಎರಡು ಉತ್ಪನ್ನಗಳಿಗೆ ನಿಷೇಧ ಹೇರಲಾಗುತ್ತದೆ.
ಅರಸೀಕೆರೆ: ಸಿಎಂ ಸಿದ್ದರಾಮಯ್ಯ ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ಘೋಷಣೆ ಕೆಲವರಿಗೆ ಅನುಕೂಲವಾದರೆ ಮತ್ತೆ ಕೆಲವರು ಅದನ್ನು ಟೀಕಿಸಿದ್ದೂ ಇದೆ. ಇದೀಗ ವಿದ್ಯಾರ್ಥಿನಿಯೊಬ್ಬರು ಸಿದ್ದರಾಮಯ್ಯಗೆ ವಿಶಿಷ್ಟವಾಗಿ ಈ ಕೊಡುಗೆ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments