Webdunia - Bharat's app for daily news and videos

Install App

ಕರ್ನಾಟಕದ ಬೆನ್ನಲ್ಲೇ ಛತ್ತೀಸಗಢದಲ್ಲೂ ಎನ್‌ಕೌಂಟರ್: ಸುಕ್ಮಾ ಜಿಲ್ಲೆಯಲ್ಲಿ ಹತ್ತು ನಕ್ಸಲರ ಹತ್ಯೆ

Sampriya
ಶುಕ್ರವಾರ, 22 ನವೆಂಬರ್ 2024 (14:46 IST)
Photo Courtesy X
ಸುಕ್ಮಾ: ಭದ್ರತಾ ಪಡೆಗಳ ಸಿಬ್ಬಂದ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ನಡೆಸಿದ ಎನ್‌ಕೌಂಟರ್‌ನಲ್ಲಿ 10 ನಕ್ಸಲರು ಹತರಾಗಿದ್ದಾರೆ.

ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಭೇಜಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತರ್ ವಲಯದ ಪೊಲೀಸ್ ಅಧಿಕಾರಿ ಸುಂದರರಾಜ್ ಪಿ. ಮಾಹಿತಿ ನೀಡಿದ್ದಾರೆ.

ಕೊರಜ್‌ಗುಡ, ದಾಂತೇಸ್‌ಪುರಂ, ನಗರಂ, ಭಂಡರ್‌ಪುರ ಪ್ರದೇಶಗಳ ಗುಡ್ಡಗಾಡಿನಲ್ಲಿ ಕೊಂಟಾ, ಕಿಸ್ತಾರಂ ನಕ್ಸಲ್ ಸಮಿತಿಗೆ ಸೇರಿದ ಮಾವೋವಾದಿಗಳ ಇರುವಿಕೆಯ ಕುರಿತು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

10 ನಕ್ಸಲರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೆ ಇನ್ಸಾಸ್ ರೈಫಲ್, ಎಕೆ-47 ರೈಫಲ್, ಎಸ್‌ಎಲ್‌ಆರ್ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರದೇಶದಲ್ಲಿ ಜಿಲ್ಲಾ ಪೊಲೀಸ್ ಮೀಸಲು ಪಡೆ (ಡಿಆರ್‌ಜಿ) ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಕಾರ್ಯಾಚರಣೆ ಮುಂದುವರಿದಿದೆ.

ಸುಕ್ಮಾ ಜಿಲ್ಲೆ ಒಳಗೊಂಡಂತೆ ಬಸ್ತರ್ ಪ್ರದೇಶದ ಏಳು ಜಿಲ್ಲೆಗಳಲ್ಲಿ ಇದುವರೆಗೆ ನಡೆದ ಕಾರ್ಯಾಚರಣೆಯಲ್ಲಿ 207 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments