Webdunia - Bharat's app for daily news and videos

Install App

ಕೇಜ್ರಿವಾಲ್ ನಾಲಗೆಯನ್ನು ಮೊದಲೇ ಕತ್ತರಿಸಬೇಕಾಗಿತ್ತಂತೆ!

Webdunia
ಸೋಮವಾರ, 19 ಸೆಪ್ಟಂಬರ್ 2016 (16:14 IST)
ಅರವಿಂದ್ ಕೇಜ್ರಿವಾಲ್ ಅವರು ನಾಲಗೆ ಶಸ್ತ್ರಚಿಕಿತ್ಸೆ ಮಾಡಕೊಂಡಿರುವುದರ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಟೀಕಿಸಿದ್ದನ್ನು ಸಮರ್ಥಿಸಿಕೊಂಡು ಮತ್ತೊಬ್ಬ ಬಿಜೆಪಿ ನಾಯಕರು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
"ಕೆಲವು ಜನರಿಗೆ ಮೌಖಿಕ ಅತಿಸಾರ ಕಾಯಿಲೆ ಇರುತ್ತದೆ. ಕೇಜ್ರಿವಾಲ್ ಕೂಡ ಅದೇ ಕೆಟಗರಿ ಅಡಿಯಲ್ಲಿ ಬರುತ್ತಾರೆ, ಹೀಗಾಗಿ ಪರಿಕ್ಕರ್ ಹೇಳಿರುವುದರಲ್ಲಿ ತಪ್ಪಿದೆ ಎಂದು ನನಗನಿಸುವುದಿಲ್ಲ", ಎಂದು ಬಿಜೆಪಿ ನಾಯಕ ಶೈನಾ ಎನ್.ಸಿ ಹೇಳಿದ್ದಾರೆ. 
 
"ಪರಿಕ್ಕರ್ ಕೇಜ್ರಿವಾಲ್ ನಾಲಗೆ ಕತ್ತರಿಸಿದ್ದರ ಹಿನ್ನೆಲೆಯಲ್ಲಷ್ಟೇ ಮಾತನಾಡಿದ್ದರು. ಅದನ್ನು ಮೊದಲೇ ಮಾಡಬೇಕಿತ್ತು", ಎಂದು ಅವರು ವ್ಯಂಗ್ಯವಾಡಿದ್ದಾರೆ. 
 
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ಮೋದಿ ಮತ್ತು ತಮ್ಮ ವಿರುದ್ಧ ಮನಬಂದಂತೆ ಟೀಕೆಗಳನ್ನು ಮಾಡುತ್ತಿರುವುದರಿಂದ ಅವರಿಗೆ ತಮ್ಮ ನಾಲಗೆಯನ್ನು ಕತ್ತರಿಸಿಕೊಳ್ಳುವ ಪರಿಸ್ಥಿತಿ ಬಂದೊಗಿದೆ ಎನ್ನಿಸುತ್ತದೆ ಎಂದು ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ಶನಿವಾರ ಹೇಳಿಕೆ ನೀಡಿದ್ದರು.

 
ಬಳಿಕ ತಮ್ಮ ಹೇಳಿಕೆ ವಿವಾದವಾಗಲಿದೆ ಎನ್ನುವುದನ್ನು ಭಾವಿಸಿ ಉಲ್ಟಾ ಹೊಡೆದು ಕೇಜ್ರಿವಾಲ್ ಅನಾರೋಗ್ಯಕ್ಕೀಡಾದ ಬಗ್ಗೆ ಸಹಾನುಭೂತಿ ಇದೆ ಎಂದು ಹೇಳಿದ್ದರು. 
 
ಕೇಜ್ರಿವಾಲ್ ದೆಹಲಿಯಲ್ಲಿ ಪ್ರಧಾನಿ ಮೋದಿಯ ವಿರುದ್ಧ ಹೇಳಿಕೆ ನೀಡುತ್ತಾರೆ. ಗೋವಾದಲ್ಲಿ ನನ್ನ ವಿರುದ್ಧ ಹೇಳಿಕೆಗಳನ್ನು ನೀಡುತ್ತಾರೆ. ಇದರಿಂದಾಗಿ ಅವರ ನಾಲಿಗೆ ದೊಡ್ಡದಾಗಿತ್ತು. ಇದೀಗ ಅದನ್ನು ಕತ್ತರಿಸಲಾಗಿದೆ ಎಂದು ಅವರು ಅಣಕವಾಡಿದ್ದರು.
 
ಕೇಜ್ರಿವಾಲ್ ಬೆಂಗಳೂರಿನಲ್ಲಿ ನಾಲಗೆ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ನಿರಂತರ ಕೆಮ್ಮಿನಿಂದಾಗಿ ಅವರ ನಾಲಗೆ ಸ್ಥಾನ ಪಲ್ಲಟವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಮುಂದಿನ ಸುದ್ದಿ
Show comments